ಮದ್ಯದ ಅಮಲಿನಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ

ಮದ್ಯದ ಅಮಲಿನಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ  Murdered by being bludgeoned with a stone while under the influence of alcohol

ನೇಸರಗಿ 28:  ಶುಕ್ರವಾರ ನಡೆದ ಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯ ಸೇವಿಸಿದ್ದ ಇಬ್ಬರು ಗೆಳೆಯರ ನಡುವೆ ಉಂಟಾದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಸಮೀಪದ ವಣ್ಣೂರು ಗ್ರಾಮದಲ್ಲಿ ನಡೆದಿದೆ.  ಗ್ರಾಮದ ನಿವಾಸಿ ಹನಮಂತಪ್ಪ ಇಟಾಪಿ (34) ಅವರನ್ನು ವಿಶ್ವನಾಥ ಪೂಜಾರಿ (45) ಎಂಬಾತ ಮದ್ಯದ ಅಮಲಿನಲ್ಲಿ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕೆ. ರಾಮರಾಜನ್, ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಹಾಗೂ ಸಿಪಿಐ ಗಜಾನನ ನಾಯ್ಕ ಭೇಟಿ ನೀಡಿ ಪರೀಶೀಲನೆ ನಡೆಸಿದರು.  ಈ ಸಂಬಂಧ ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಳ್ಳಲಾಗಿದೆ.