ಶಾಸ್ತ್ರಬದ್ಧ ಸಂಗೀತ ಕಲಿಕೆಗೆ ಏಕಾಗ್ರತೆ ಮುಖ್ಯ: ಕೆ.ಚ್ ಚನ್ನೂರ
Music learning program for students from Scheduled Tribes
ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಸಂಗೀತ ಕಲಿಕಾ ಕಾರ್ಯಕ್ರಮ
ಬೆಳಗಾವಿ,ಜು.15 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮಂಗಳವಾರ (ಜು.15) ಹುಕ್ಕೇರಿ ತಾಲೂಕಿನ ನರಸಿಂಗಪೂರದ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಬಾಲಕಿಯರ ತರಬೇತಿ ನಿಲಯದಲ್ಲಿ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ "ಸಂಗೀತ ತರಬೇತಿ ಕಾರ್ಯಗಾರ" ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕರಾದ ಕೆ.ಎಚ್. ಚನ್ನೂರ ಮಾತನಾಡಿ ಶಾಸ್ತ್ರ ಬದ್ಧವಾಗಿ ಸಂಗೀತವನ್ನು ಏಕಾಗ್ರತೆಯಿಂದ ಕಲೆತಾಗ ಮಾತ್ರ ಸಂಗೀತ ಕಲೆಯಲು ಸಾಧ್ಯವಾಗುತ್ತದೆ ಎಂದರು.
ಸಂಗೀತವನ್ನು ಎಲ್ಲರೂ ಕಲಿಯಲು ಸಾಧ್ಯವಿಲ್ಲ, ನಿರಂತರ ಸೇವೆಯಿಂದ ಶ್ರದ್ಧೆಯಿಂದ ಮಾತ್ರ ಸಂಗೀತ ಕಲಿಯಲಿಕ್ಕೆ ಸಾಧ್ಯವಾಗುತ್ತದೆ. ಸಂಗೀತ ವಿದ್ಯಾರ್ಹತೆ ಹೊಂದಿರುವ ಗುರುಗಳು ಇರುವುದರಿಂದ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಸಂಗೀತ ಕಲಿಯಬೇಕು ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಮಹೇಶ ಭಜಂತ್ರಿ, ಸಂಗೀತ ತರಬೇತಿ ಗುರುಗಳು ಮತ್ತು ಗಾಯಕಿ ರೂಪಾ ಖಡಗಾಂವಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 