ಶಾಸ್ತ್ರಬದ್ಧ ಸಂಗೀತ ಕಲಿಕೆಗೆ ಏಕಾಗ್ರತೆ ಮುಖ್ಯ: ಕೆ.ಚ್ ಚನ್ನೂರ
Music learning program for students from Scheduled Tribes
ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಸಂಗೀತ ಕಲಿಕಾ ಕಾರ್ಯಕ್ರಮ
ಬೆಳಗಾವಿ,ಜು.15 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮಂಗಳವಾರ (ಜು.15) ಹುಕ್ಕೇರಿ ತಾಲೂಕಿನ ನರಸಿಂಗಪೂರದ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಬಾಲಕಿಯರ ತರಬೇತಿ ನಿಲಯದಲ್ಲಿ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ "ಸಂಗೀತ ತರಬೇತಿ ಕಾರ್ಯಗಾರ" ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕರಾದ ಕೆ.ಎಚ್. ಚನ್ನೂರ ಮಾತನಾಡಿ ಶಾಸ್ತ್ರ ಬದ್ಧವಾಗಿ ಸಂಗೀತವನ್ನು ಏಕಾಗ್ರತೆಯಿಂದ ಕಲೆತಾಗ ಮಾತ್ರ ಸಂಗೀತ ಕಲೆಯಲು ಸಾಧ್ಯವಾಗುತ್ತದೆ ಎಂದರು.
ಸಂಗೀತವನ್ನು ಎಲ್ಲರೂ ಕಲಿಯಲು ಸಾಧ್ಯವಿಲ್ಲ, ನಿರಂತರ ಸೇವೆಯಿಂದ ಶ್ರದ್ಧೆಯಿಂದ ಮಾತ್ರ ಸಂಗೀತ ಕಲಿಯಲಿಕ್ಕೆ ಸಾಧ್ಯವಾಗುತ್ತದೆ. ಸಂಗೀತ ವಿದ್ಯಾರ್ಹತೆ ಹೊಂದಿರುವ ಗುರುಗಳು ಇರುವುದರಿಂದ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಸಂಗೀತ ಕಲಿಯಬೇಕು ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಮಹೇಶ ಭಜಂತ್ರಿ, ಸಂಗೀತ ತರಬೇತಿ ಗುರುಗಳು ಮತ್ತು ಗಾಯಕಿ ರೂಪಾ ಖಡಗಾಂವಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 