ಪೌರತ್ವ ಕಾಯ್ದೆಯಿಂದ ಮುಸ್ಲಿಂ ರಿಗೆ ತೊಂದರೆಯಿಲ್ಲ: ಶಾಹಿ ಇಮಾಮ್ ಬುಖಾರಿ
ನವದೆಹಲಿ, ಡಿ 18ಕೇಂದ್ರದ
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತದಲ್ಲಿ ನೆಲೆಸಿರುವ ಮುಸ್ಲಿಂ ಸಮುದಾಯ ಯಾವುದೇ ರೀತಿಯ ಆತಂಕ, ತೊಂದರೆ, ಭಯ
ಪಡುವ ಅವಶ್ಯಕತೆಯಿಲ್ಲ ಎಂದು ದಿಲ್ಲಿಯ ಜಾಮಾ
ಮಸೀದಿಯ ಶಾಹಿ ಇಮಾಮ್ ಅಭಿಪ್ರಾಯ ಪಟ್ಟಿದ್ದಾರೆ.ಪ್ರಜಾತಂತ್ರದ ವ್ಯವಸ್ಥೆಯಲ್ಲಿ ಪ್ರತಿಭಟನೆ ಜನರ ಹಕ್ಕು
ಎಂದ ಅವರು, ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ,
ಹಿಂಸಾಚಾರ ವ್ಯಾಪಿಸಿರುವಾಗ ಶಾಹಿ ಇಮಾಮ್ ಅವರ ಈ ಹೇಳಿಕೆಗೆ ರಾಜಕೀಯವಾಗಿಯೂ ಬಹಳ ಮಹತ್ವ ಬಂದಿದೆ. ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು ನಿಜ, ಯಾರೊಬ್ಬರು
ಅದನ್ನು ತಡೆಯಲು ಸಾಧ್ಯವಿಲ್ಲ. ಆದರೆ ಅದನ್ನು ನಿಯಂತ್ರಿಸುವುದು
ಸಹ ಮುಖ್ಯವಾಗಿದೆ. ಭಾವುಕತೆ, ಭಾವನೆಯನ್ನು ನಮ್ಮ ಹಿಡಿತದಲ್ಲಿಟ್ಟುಕೊಳ್ಳುವುದು
ಕೂಡಾ ಅಷ್ಟೇ ಮುಖ್ಯ ಎಂದು ಇಮಾಮ್ ಸೈಯದ್ ಅಹ್ಮದ್ ಬುಖಾರಿ ನೀಡಿದ್ದಾರೆ ಎನ್ನಲಾದ ಹೇಳಿಕೆಯ ವಿಡಿಯೋವನ್ನು ಖಾಸಗಿ ಟಿವಿವಾಹಿನಿಯೊಂದು ಪ್ರಸಾರ
ಮಾಡಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 