ವಕ್ಫ್ ತಿದ್ದುಪಡಿ ಕಾಯ್ದೆ ರದ್ದುಪಡಿಸಲು ಮುಸ್ಲಿಮರ ಮೌನ ಪ್ರತಿಭಟನೆ
Muslims hold silent protest to repeal Waqf Amendment Act
ಕೊಪ್ಪಳ 04: ಮುಸ್ಲಿಂ ಸಮುದಾಯ ವನ್ನು ಹತ್ತಿಕ್ಕಲು ಹುನ್ನಾರ ನಡೆಸಿದ ಕೇಂದ್ರ ಸರ್ಕಾರ ಇತ್ತೀಚಿಗೆ ತಂದಿರುವ ವಕ್ಫ್ ತಿದ್ದುಪಡೆ ಕಾಯ್ದೆ ಕೂಡಲೇ ರದ್ದು ಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಮುಸ್ಲಿಂ ಬೋರ್ಡ್ ಮತ್ತು ಮುಸ್ಲಿಂ ಸಂಘಟನೆ ಯ ನಿರ್ದೇಶನದಲ್ಲಿ ಶುಕ್ರವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ ಮತ್ತು ತಾಲೂಕ ಕೇಂದ್ರ ಗಳಲ್ಲಿರುವ ಮಸೀದಿಗಳ ಮುಂದೆ ಶುಕ್ರವಾರದ ವಿಶೇಷ ಪ್ರಾರ್ಥನೆಯ ಬಳಿಕ ಮಸೀದಿ ಎದುರುಗಡೆ ಮಾನವ ಸರಿ್ಳ ಮಾಡಿ ಎಲ್ಲರೂ ಒಕ್ಕೂರಿನಿಂದ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕೆಂದು ಆಗ್ರಹಿಸಿದರು.
ನಗರದ ಅಮೀನ್ ಪೂರ್ ಬಡಾವಣೆಯ ರೈಲ್ವೆ ಸ್ಟೇಷನ್ ದಾರಿಯಲ್ಲಿರುವ ಮಸ್ಜಿದೆ ಆಲಾ ದಲ್ಲಿ ಶುಕ್ರವಾರ ಮಧ್ಯಾಹ್ನ ಪ್ರಾರ್ಥನೆ ಬಳಿಕ ಮಸೀದಿ ಎದುರುಗಡೆ ಇರುವ ರಸ್ತೆಯಲ್ಲಿ ಸಾಮೂಹಿಕವಾಗಿ ಮಾನವ ಸರಿ್ಳ ನಿರ್ಮಿಸಿ ಮೌನ ಪ್ರತಿಭಟನೆಯನ್ನು ಮಾಡಿದರು, ಇಲ್ಲಿನ ಮೌನ ಪ್ರತಿಭಟನೆಯ ನೇತೃತ್ವವನ್ನು ಮೌಲಾನ ಮೊಹಮ್ಮದ್ ಫಜೀಲ್ ಅಹಮದ್ ರವರು ವಹಿಸಿಕೊಂಡಿದ್ದರು ಅಧಿಕ ಸಂಖ್ಯೆಯಲ್ಲಿ ಮುಸ್ಲಿಮರು ಇದರಲ್ಲಿ ಪಾಲ್ಗೊಂಡಿದ್ದರು.
ಅದರಂತೆ ನಗರದ ವಿವಿಧ ಮಸೀದಿ ಗಳ ಎದುರುಗಡೆ ಎಲ್ಲಾ ಮುಸ್ಲಿಂ ಸಮುದಾಯದವರು ಸೇರಿಕೊಂಡು ಮಾನವ ಸರಿ್ಳ ನಿರ್ಮಿಸಿ ಮೌನ ಪ್ರತಿಭಟನೆ ನಡೆಸಲಾಯಿತು ಹಾಗೂ ಕೂಡಲೇ ವಕ್ಫ್ ತಿದ್ದುಪಡಿ ಕಾಯ್ದೆ ರದ್ದು ಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಯಿತು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 