ನನ್ನದೆ ತಪ್ಪು ಕವನ ಸಂಕಲನ ಬಿಡುಗಡೆ ಸಮಾರಂಭ
My Mistake Poetry Collection Release Ceremony
ಲೋಕದರ್ಶನ ವರದಿ
ಯಮಕನಮರಡಿ 15: ಗಡಿಭಾಗದ ಹುಕ್ಕೇರಿ ತಾಲ್ಲೂಕಿನ ಸೊಲಾಪುರ ಗ್ರಾಮ ಪಂಚಾಯ್ತಿಯಲ್ಲಿ ವಿಶ್ವ ಕನ್ನಡಿಗ ಡಾ. ಕುಮಾರ ತಳವಾರ ವಿರಚಿತ "ನನ್ನದೆ ತಪ್ಪು " ಕವನಸಂಕಲನ ಬಿಡುಗಡೆ ಸಮಾರಂಭ ಜರುಗಿತು. ಇದೇ ಸಂದರ್ಭದಲ್ಲಿ ಹುಕ್ಕೇರಿ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರಕಾಶ ಅವಲಕ್ಕಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಸಾಪದ ಸದಸ್ಯರಾದ ಎ ಬಿ ನಾಯಿಕ, ಕಾಡೇಶ ಬಸ್ತವಾಡೆ, ಖನ್ನಿನಾಯ್ಕಸರ್, ರೈತ ಸಂಘದ ಅಧ್ಯಕ್ಷ, ಶಿಂತ್ರೆ ಗ್ರಾಮದ ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು. ಕಸಾಪ ಪರವಾಗಿ ಕವಿ ಕುಮಾರ ತಳವಾರ ಅವರನ್ನು ಸತ್ಕಾರಿಸಲಾಯಿತು. ಈ ಸಮಾರಂಭದಲ್ಲಿ ಕುಮಾರ ಅವರಿಂದ ಎಸ್ಎಸ್ಎಲ್ಸಿ ಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗು ಅಗ್ನಿವೀರ ಸೈನಿಕರ ಪಾಲಕರನ್ನು ಗೌರವಿಸಿ ಸನ್ಮಾನಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 