ಸವದತ್ತಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಸಂಕಲ್ಪ: ವಿಶ್ವಾಸ ವೈದ್ಯ
My resolve is to develop the charitable sector comprehensively: Vishwas Vaidya
ಯರಗಟ್ಟಿ 15 : ತಾಲೂಕಿನ ಸೋಮಾಪುರ ಗ್ರಾಮದ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ರಸ್ತೆ ನಿರ್ಮಾಣ ಕಾಮಗಾರಿಗೆ ರವಿವಾರ ಶಾಸಕ ವಿಶ್ವಾಸ ವೈದ್ಯ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ವಿಶ್ವಾಸ ವೈದ್ಯ ಅವರು ?ಸನ್ 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (5054 ಯೋಜನೆಯಡಿ), ಯರಗಟ್ಟಿ ತಾಲೂಕಿನ ತಲ್ಲೂರ-ಸೋಮಾಪುರ ಮುಖ್ಯ ರಸ್ತೆಯಿಂದ ರಾಜಪ್ಪಜ್ಜನ ದೇವಸ್ಥಾನದವರೆಗೆ ನಿರ್ಮಾಣವಾಗಲಿದೆ ಅಂದಾಜು ವೆಚ್ಚ: ?25 ಲಕ್ಷ ರೂಪಾಯಿಗಳು ಸಿ.ಸಿ ರಸ್ತೆ ಕಾಮಗಾರಿಯ ಚಾಲನೆ ನೀಡಲಾಗಿದೆ.
ಈ ರಸ್ತೆ ನಿರ್ಮಾಣದಿಂದ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಹಾಗೂ ಸ್ಥಳೀಯ ಗ್ರಾಮಸ್ಥರಿಗೆ ಸುಗಮ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಗುಣಮಟ್ಟದ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.?ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಸುಸಜ್ಜಿತ ರಸ್ತೆಗಳ ನಿರ್ಮಾಣ ಮಾಡುವುದು ನಮ್ಮ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ರಾಜ್ ಇಲಾಖೆ ಎಇಇ ಎಚ್. ಎ. ಕದ್ರಾಪೂರಕರ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ, ಫಕೀರ್ಪ ಗೋಟಿ, ಭೀಮಶಿ ಗೋಟಿ, ಪ್ರಕಾಶ ಮುರಗೋಡ, ರಮೇಶ ಹಮ್ಮಿನಿ, ಸಹದೇವ ನಾಯ್ಕರ, ಸಿದ್ದಾರ್ಥ ಗೋಟಿ, ಶಶಿಧರ ತಳವಾರ, ಮಹಾಂತೇಶ ಶೀಲವಂತರ, ಅದೃಶ್ಯ ಶೀಲವಂತರ, ರಾಘವೇಂದ್ರ ಗಿಡ್ಡಮಲ್ಲಪ್ಪಗೋಳ,ಸಿ. ಬಿ ಬಾಳಿ, ಡಿ. ಡಿ. ಕಿನ್ನರಿ, ಪ್ರಕಾಶ ಸುಣ್ಣದೋಳಿ, ಪ್ರಸಾದ ವೀರ್ಪನ್ನವರಮಠ, ಬಸವರಾಜ್ ಕಂಬಾರ ಸೇರಿದಂತೆ ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು, ಇಲಾಖೆಯ ಅಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 