ಮೈಲಾರ: ಆನೆ ರಥದಲ್ಲಿ ಮಲ್ಲಣ್ಣ ದೇವರ ಮೆರವಣಿಗೆ
Mylara: The procession of Lord Mallanna
ಬೀದರ್ 23: ಭಾಲ್ಕಿ ತಾಲ್ಲೂಕಿನ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಜಾತ್ರೆ ನಿಮಿತ್ತ ರವಿವಾರ ರಾತ್ರಿ 10-30 ಗಂಟೆಗೆ ಮಲ್ಲಣ್ಣ ದೇವರ ಮೆರವಣಿಗೆ ಆನೆ ರಥದಲ್ಲಿ ನಡೆಯಿತು.
ಮೆರವಣಿಗೆಯು ದೇವಸ್ಥಾನದಿಂದ ಹೊರಟು ಗಣೇಶ ಕುಂಡ, ಜ್ಯೋತಿಲಿಂಗ ದೇವಸ್ಥಾನ, ತೆಪ್ಪದ ಕುಂಡ ಹಾದು ಪೃತಮಾರಿ ದೇವಸ್ಥಾನಕ್ಕೆ ತಲುಪಿ ವಗ್ಗೆ ಕಡೆಯಿಂದ ಹಾಡು, ಚಾಬುಕ ನೃತ್ಯ ನಡೆಯಿತು.
ಮಲ್ಲಣ್ಣ ದೇವಸ್ಥಾನಕ್ಕೆ ಆಗಮಿಸಿ ಮಂಗಳಾರತಿರೊಂದಿಗೆ ಮೆರವಣಿಗೆಯ ಸಮಾಪ್ತಿ ಮಾಡಲಾಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ ಮೇತ್ರೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ, ವ್ಯವಸ್ಥಾಪಕ ಸಂಜೀವಕುಮಾರ ಸುಂದಾಳ, ಪ್ರಧಾನ ಅರ್ಚಕ ಬಸಪ್ಪ ಹಿರಿವಗ್ಗೆ, ಮಲ್ಲಿಕಾರ್ಜುನ ಹಿರಿವಗ್ಗೆ, ಪ್ರಕಾಶ ಹಿರಿವಗ್ಗೆ ಮತ್ತು ಆಕಾಶ ಹಿರಿವಗ್ಗೆ ಸೇರಿದಂತೆ ದೇವಸ್ಥಾನದ ಸಿಬ್ಬಂದಿಗಳು ಕೂಡ ಇದ್ದರು.
ಜಾತ್ರೆ ನಿಮಿತ್ಯ ಮಹಾರಾಷ್ಟ್ರ, ತೇಲಂಗಾಣ, ಆಂಧ್ರ ಮತ್ತು ಕರ್ನಾಟಕ ಸೇರಿದಂತೆ ವಿವಿಧ ಕಡೆಯಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 