ಮೈಲಾರ: ಆನೆ ರಥದಲ್ಲಿ ಮಲ್ಲಣ್ಣ ದೇವರ ಮೆರವಣಿಗೆ
Mylara: The procession of Lord Mallanna
ಬೀದರ್ 23: ಭಾಲ್ಕಿ ತಾಲ್ಲೂಕಿನ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಜಾತ್ರೆ ನಿಮಿತ್ತ ರವಿವಾರ ರಾತ್ರಿ 10-30 ಗಂಟೆಗೆ ಮಲ್ಲಣ್ಣ ದೇವರ ಮೆರವಣಿಗೆ ಆನೆ ರಥದಲ್ಲಿ ನಡೆಯಿತು.
ಮೆರವಣಿಗೆಯು ದೇವಸ್ಥಾನದಿಂದ ಹೊರಟು ಗಣೇಶ ಕುಂಡ, ಜ್ಯೋತಿಲಿಂಗ ದೇವಸ್ಥಾನ, ತೆಪ್ಪದ ಕುಂಡ ಹಾದು ಪೃತಮಾರಿ ದೇವಸ್ಥಾನಕ್ಕೆ ತಲುಪಿ ವಗ್ಗೆ ಕಡೆಯಿಂದ ಹಾಡು, ಚಾಬುಕ ನೃತ್ಯ ನಡೆಯಿತು.
ಮಲ್ಲಣ್ಣ ದೇವಸ್ಥಾನಕ್ಕೆ ಆಗಮಿಸಿ ಮಂಗಳಾರತಿರೊಂದಿಗೆ ಮೆರವಣಿಗೆಯ ಸಮಾಪ್ತಿ ಮಾಡಲಾಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ ಮೇತ್ರೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ, ವ್ಯವಸ್ಥಾಪಕ ಸಂಜೀವಕುಮಾರ ಸುಂದಾಳ, ಪ್ರಧಾನ ಅರ್ಚಕ ಬಸಪ್ಪ ಹಿರಿವಗ್ಗೆ, ಮಲ್ಲಿಕಾರ್ಜುನ ಹಿರಿವಗ್ಗೆ, ಪ್ರಕಾಶ ಹಿರಿವಗ್ಗೆ ಮತ್ತು ಆಕಾಶ ಹಿರಿವಗ್ಗೆ ಸೇರಿದಂತೆ ದೇವಸ್ಥಾನದ ಸಿಬ್ಬಂದಿಗಳು ಕೂಡ ಇದ್ದರು.
ಜಾತ್ರೆ ನಿಮಿತ್ಯ ಮಹಾರಾಷ್ಟ್ರ, ತೇಲಂಗಾಣ, ಆಂಧ್ರ ಮತ್ತು ಕರ್ನಾಟಕ ಸೇರಿದಂತೆ ವಿವಿಧ ಕಡೆಯಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 