ಮೈಸೂರು ಸ್ಯಾಂಡಲ್ ಸಾಬೂನು ವಿತರಣಾ ಕಾರ್ಯಕ್ರಮಕ್ಕೆ ಚಾಲನೆ
Mysore Sandal Soap Distribution Program Launched
ತಾಳಿಕೋಟಿ 22: ದೇವಿಕಾ ಸುಬ್ಬರಾವ್ ಫೌಂಡೇಶನ್ ಮುದ್ದೇಬಿಹಾಳ ಇವರ ವತಿಯಿಂದ ಕ್ಷೇತ್ರದ ಪ್ರತಿ ಮನೆಗೂ ಮೈಸೂರು ಸ್ಯಾಂಡಲ್ ಸೋಪ ಉಚಿತವಾಗಿ ವಿತರಿಸುವ ಕಾರ್ಯಕ್ರಮಕ್ಕೆ ಪಟ್ಟಣದ ಭೂವಿ ವಡ್ಡರ ಬಡಾವಣೆಯಲ್ಲಿ ಪುರಸಭೆ ಮಾಜಿ ಸದಸ್ಯ ಪ್ರಭುಗೌಡ ಮದರಕಲ್ಲ ಶನಿವಾರ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಾಸಕ ನಾಡಗೌಡರ ಪುತ್ರಿಯಾದ ಪಲ್ಲವಿ ನಾಡಗೌಡರು ತಮ್ಮ ದೇವಿಕಾ ಸುಬ್ಬರಾವ್ ಫೌಂಡೇಶನ್ ದ ಮೂಲಕ ಈಗಾಗಲೇ ಹಲವಾರು ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿದ್ದು ಇದೀಗ ಕ್ಷೇತ್ರದ ಪ್ರತಿ ಮನೆಗೂ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಬೇಡಿಕೆ ಪಡೆದ ಈ ಸಾಬೂನುವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು. ಪುರಸಭೆ ಮಾಜಿ ಅಧ್ಯಕ್ಷೆ ನೀಲಮ್ಮಗೌಡತಿ ಪಾಟೀಲ ಅವರು ಮಾತನಾಡಿ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಫೌಂಡೇಶನ್ ದ ಅಧ್ಯಕ್ಷೆಯಾದ ಪಲ್ಲವಿ ನಾಡಗೌಡರು ಹಮ್ಮಿಕೊಂಡ ಈ ಕಾರ್ಯಕ್ರಮಕ್ಕೆ ಭೂವಿ ವಡ್ಡರ ಬಡಾವಣೆಯಲ್ಲಿ ಚಾಲನೆ ನೀಡಲಾಗಿದ್ದು ಪಟ್ಟಣದ ಪ್ರತಿ ಮನೆಗೂ ತಲುಪಿ ಈ ಸಾಬೂನುವನ್ನು ತಲುಪಿಸುವ ಕಾರ್ಯ ಮಾಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಮುಖಂಡರಾದ ಸಿದ್ದನಗೌಡ ಪಾಟೀಲ(ನಾವದಗಿ), ಮಲ್ಲಿಕಾರ್ಜುನ ಪಟ್ಟಣಶೆಟ್ಟಿ,ಪರುಶರಾಮ ತಂಗಡಗಿ, ಅಕ್ಕಮಹಾದೇವಿ ಕಟ್ಟಿಮನಿ, ಜುಬೇದಾ ಜಮಾದಾರ,ಗೌರಮ್ಮ ಕುಂಬಾರ, ಸಂಗನಗೌಡ ಅಸ್ಕಿ,ಮಹೆಬೂಬ ಕೆಂಭಾವಿ,ಬಸವರಾಜ ಕುಂಬಾರ, ಹುಸೇನಬಾಷಾ ಜಮಾದಾರ, ಸದಾಶಿವ ರೆಡ್ಡಿ ಇಬ್ರಾಹಿಂಪೂರ, ಅಪ್ಪುಗೌಡ ಮಾಡಗಿ, ಬಸವರಾಜ ಮಾಲಿಪಾಟೀಲ, ಲಕ್ಷ್ಮಣ ಕೆ.ಲಮಾಣಿ, ಗೋಪಾಲ ಕಟ್ಟಿಮನಿ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 