ಮೈಸೂರು ಸ್ಯಾಂಡಲ್ ಸಾಬೂನು ವಿತರಣಾ ಕಾರ್ಯಕ್ರಮಕ್ಕೆ ಚಾಲನೆ
Mysore Sandal Soap Distribution Program Launched
ತಾಳಿಕೋಟಿ 22: ದೇವಿಕಾ ಸುಬ್ಬರಾವ್ ಫೌಂಡೇಶನ್ ಮುದ್ದೇಬಿಹಾಳ ಇವರ ವತಿಯಿಂದ ಕ್ಷೇತ್ರದ ಪ್ರತಿ ಮನೆಗೂ ಮೈಸೂರು ಸ್ಯಾಂಡಲ್ ಸೋಪ ಉಚಿತವಾಗಿ ವಿತರಿಸುವ ಕಾರ್ಯಕ್ರಮಕ್ಕೆ ಪಟ್ಟಣದ ಭೂವಿ ವಡ್ಡರ ಬಡಾವಣೆಯಲ್ಲಿ ಪುರಸಭೆ ಮಾಜಿ ಸದಸ್ಯ ಪ್ರಭುಗೌಡ ಮದರಕಲ್ಲ ಶನಿವಾರ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಾಸಕ ನಾಡಗೌಡರ ಪುತ್ರಿಯಾದ ಪಲ್ಲವಿ ನಾಡಗೌಡರು ತಮ್ಮ ದೇವಿಕಾ ಸುಬ್ಬರಾವ್ ಫೌಂಡೇಶನ್ ದ ಮೂಲಕ ಈಗಾಗಲೇ ಹಲವಾರು ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿದ್ದು ಇದೀಗ ಕ್ಷೇತ್ರದ ಪ್ರತಿ ಮನೆಗೂ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಬೇಡಿಕೆ ಪಡೆದ ಈ ಸಾಬೂನುವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು. ಪುರಸಭೆ ಮಾಜಿ ಅಧ್ಯಕ್ಷೆ ನೀಲಮ್ಮಗೌಡತಿ ಪಾಟೀಲ ಅವರು ಮಾತನಾಡಿ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಫೌಂಡೇಶನ್ ದ ಅಧ್ಯಕ್ಷೆಯಾದ ಪಲ್ಲವಿ ನಾಡಗೌಡರು ಹಮ್ಮಿಕೊಂಡ ಈ ಕಾರ್ಯಕ್ರಮಕ್ಕೆ ಭೂವಿ ವಡ್ಡರ ಬಡಾವಣೆಯಲ್ಲಿ ಚಾಲನೆ ನೀಡಲಾಗಿದ್ದು ಪಟ್ಟಣದ ಪ್ರತಿ ಮನೆಗೂ ತಲುಪಿ ಈ ಸಾಬೂನುವನ್ನು ತಲುಪಿಸುವ ಕಾರ್ಯ ಮಾಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಮುಖಂಡರಾದ ಸಿದ್ದನಗೌಡ ಪಾಟೀಲ(ನಾವದಗಿ), ಮಲ್ಲಿಕಾರ್ಜುನ ಪಟ್ಟಣಶೆಟ್ಟಿ,ಪರುಶರಾಮ ತಂಗಡಗಿ, ಅಕ್ಕಮಹಾದೇವಿ ಕಟ್ಟಿಮನಿ, ಜುಬೇದಾ ಜಮಾದಾರ,ಗೌರಮ್ಮ ಕುಂಬಾರ, ಸಂಗನಗೌಡ ಅಸ್ಕಿ,ಮಹೆಬೂಬ ಕೆಂಭಾವಿ,ಬಸವರಾಜ ಕುಂಬಾರ, ಹುಸೇನಬಾಷಾ ಜಮಾದಾರ, ಸದಾಶಿವ ರೆಡ್ಡಿ ಇಬ್ರಾಹಿಂಪೂರ, ಅಪ್ಪುಗೌಡ ಮಾಡಗಿ, ಬಸವರಾಜ ಮಾಲಿಪಾಟೀಲ, ಲಕ್ಷ್ಮಣ ಕೆ.ಲಮಾಣಿ, ಗೋಪಾಲ ಕಟ್ಟಿಮನಿ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 