ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರ, ಆತನ ಸ್ನೇಹಿತ ಗುಂಡಿಗೆ ಬಲಿ
ಚಂಡೀಗಢ, ಫೆ 2, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ತವರು ನಗರವಾದ ಪಾಟಿಯಾಲದಲ್ಲಿ ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರ ಹಾಗೂ ಆತನ ಸ್ನೇಹಿತ ಗುಂಡಿಗೆ ಬಲಿಯಾಗಿದ್ದಾರೆ.ಪಂಜಾಬ್ ರಾಜ್ಯ ವಿದ್ಯುತ್ ಕಾರ್ಪೋರೇಷನ್ ಲಿಮಿಟೆಡ್ನ ಉದ್ಯೋಗಿಗಳಾಗಿರುವ ಅರ್ಮಿಕ್ ಸಿಂಗ್ ಹಾಗೂ ಸಿಮ್ರಾನ್ಜಿತ್ ಸಿಂಗ್ ಗುಂಡಿಗೆ ಬಲಿಯಾದವರು ಎಂದು ಗುರುತಿಸಲಾಗಿದೆ.
ಉಪಾಹಾರ ಗೃಹದಲ್ಲಿ ಮೃತರು, ಹಾಗೂ ಮನೋಜ್ ಕುಮಾರ್ ಮತ್ತು ಅವರ ಮಗನೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ತಂದೆ ಮಗ ಸೇರಿಕೊಂಡು ಅರ್ಮಿಕ್ ಸಿಂಗ್ ಹಾಗೂ ಸಿಮ್ರಾನ್ಜಿತ್ ಸಿಂಗ್ ಅವರನ್ನು ಥಳಿಸಿದ್ದಾರೆ.ಈ ಘಟನೆಯ ಬಳಿಕ ಆಕ್ರೋಶಗೊಂಡ ಮನೋಜ್, ಮನೆಗೆ ತೆರಳಿ ರೈಫಲ್ ತಂದು ಅರ್ಮಿಕ್ ಸಿಂಗ್ ಹಾಗೂ ಸಿಮ್ರಾನ್ಜಿತ್ ಸಿಂಗ್ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಐಪಿಸಿ ಸೆಕ್ಷನ್ 302ರ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 