ಎನ್ ಸಿಸಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಅಭಿನಂದನಾ ಪತ್ರಗಳನ್ನು ನೀಡಿ ಗೌರವಿಸಲಾಯಿತು
13 ರಿಂದ 24 ರವರಿಗೆ ತಾಲೂಕಾ ಕ್ರೀಡಾಂಗಣ
ಎನ್ ಸಿಸಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಅಭಿನಂದನಾ ಪತ್ರಗಳನ್ನು ನೀಡಿ ಗೌರವಿಸಲಾಯಿತು
ಬ್ಯಾಡಗಿ 27: ಬುಧವಾರ ಸ್ಥಳೀಯ ರೋಟರಿ ಕ್ಲಬ್ ವತಿಯಿಂದ ಎಸ್ ಜೆಜೆಎಂ ಕಾಲೇಜಿನಲ್ಲಿ ಎನ್ ಸಿಸಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಅಭಿನಂದನಾ ಪತ್ರಗಳನ್ನು ನೀಡಿ ಗೌರವಿಸಲಾಯಿತು. ನ. 13 ರಿಂದ 24 ರವರಿಗೆ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಶ್ರೀಗಳ ಆಧ್ಯಾತ್ಮ ಪ್ರವಚನ ಕಾರ್ಯಕ್ರಮದಲ್ಲಿ ಎಸ್ ಜೆಜೆಎಂ ಕಾಲೇಜಿನ ಉಪನ್ಯಾಸಕರು ಹಾಗೂ ಎನ್ ಸಿಸಿ ಕ್ಯಾಪ್ಟನ್ ಡಿ ಬಿ ಕುಸಗೂರ ಅವರ ನೇತೃತ್ವದಲ್ಲಿ 96 ಎನ್ ಸಿಸಿ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿ ಕ್ರೀಡಾಂಗಣದ ಆವರಣದಲ್ಲಿ ಪ್ರವಚನ ಕೇಳಲು ಬಂದ ಜನತೆಯನ್ನು ಶಾಂತ ಹಾಗೂ ಶಿಸ್ತು ಬದ್ಧತೆಯಿಂದ ಕೂರಿಸುವಲ್ಲಿ ಶ್ರಮಿಸಿ ಮತ್ತು ಶ್ರೀಗಳ ಪ್ರವಚನಗಳು ಯಶಸ್ವಿಯಾಗಿ ಜರುಗಲು ನಿಶ್ವಾರ್ಥತೆಯಿಂದ ಸೇವೆ ಸಲ್ಲಿಸಿದಎನ್ ಸಿಸಿ ಕೆಡೆಟ್ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಧನ್ಯತೆ ಅರ್ಿಸುವ ಜೊತೆಗೆ ರೋಟರಿ ಕ್ಲಬ್ ವತಿಯಿಂದ ನೋಟ್ಸ್ ಬುಕ್ ಹಾಗೂ ಅಭಿನಂದನಾ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಮಂಜುನಾಥ ಉಪ್ಪಾರ,ಅಧ್ಯಕ್ಷ ಎಸ್ ಎಂ ಬೂದಿಹಾಳಮಠ, ಕಾರ್ಯದರ್ಶಿ ನಿರಂಜನ ಶೆಟ್ಟಿಹಳ್ಳಿ, ಜಂಟಿ ಕಾರ್ಯದರ್ಶಿ ಚಂದ್ರಶೇಖರ ಗಾಣಿಗೇರ, ಅನಿಲಕುಮಾರ ಬೊಡ್ಡಪಾಟಿ, ವಿಶ್ವನಾಥ ಅಂಕಲಕೋಟಿ, ಪವಾಡಪ್ಪ ಆಚನೂರ, ಕಿರಣ ಮಾಳೇನಹಳ್ಳಿ, ಸತೀಶ ಅಗಡಿ ಆರ್ಮಿಯ ಜೆ ಸಿ ಓ ರಾಜು ಗೌಡರ, ವಿಜಯಕುಮಾರ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 