ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಗೆ ಎನ್ಡಿಆರ್ಎಫ್ ಸೂಚನೆ
ಬೆಂಗಳೂರು, ಏ.7,ರಾಜ್ಯದಲ್ಲಿ ಲಾಕ್ ಡೌನ್ ಇನ್ನಷ್ಟು ಬಿಗಿಗೊಳಿಸಲು ನೇರವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಅಖಾಡಕ್ಕೆ ಇಳಿದಿದೆ.ಲಾಕ್ಡೌನ್ ಸಂಪೂರ್ಣವಾಗಿ ಯಶಸ್ವಿಗೊಳಿಸಲು ಎನ್ಡಿಆರ್ಎಫ್ ತಂಡ ಪೊಲೀಸರಿಗೆ ಪೂರ್ಣ ಅನುಮತಿ ನೀಡಿದೆ. ಈ ಸಂಬಂಧ ರಾಜ್ಯದ ಗೃಹ ಕಾರ್ಯದರ್ಶಿ ಮತ್ತು ರಾಜ್ಯಪೊಲೀಸ್ ಮಹಾ ನಿರ್ದೇಶಕರಿಗೆ ಪೂರ್ಣ ಅಧಿಕಾರ ನೀಡಿ ಆದೇಶ ಹೊರಡಿಸಿದೆ.ರಾಜ್ಯ ಡಿಸಾಸ್ಟರ್ ಮ್ಯಾನೇಜಮೆಂಟ್' ಉಪಾಧ್ಯಕ್ಷ ಆರ್ ಅಶೋಕ್ ಅವರ ಹೆಸರಿನಲ್ಲಿ ಈ ಆದೇಶ ಹೊರಡಿಸಲಾಗಿದ್ದು, ಲಾಕ್ ಡೌನ್ ವೇಳೆ ನಿಯಮ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ2005 ರಡಿ ಪ್ರಕರಣ ದಾಖಲಿಸುವಂತೆಯೂ ಠಾಣಾಧಿಕಾರಿಗಳಿಗೆ ಸೂಚಿಸಲಾಗಿದೆ. ಲಾಕ್ಡೌನ್ ಸಂಪೂರ್ಣವಾಗಿ ಜಾರಿಗೊಳಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ರಾಜ್ಯ ವಿಪತ್ತು ನಿರ್ವಹಣಾ ಸಮಿತಿ ಉಪಾಧ್ಯಕ್ಷ ಆರ್ ಅಶೋಕ್ ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 