ದಿಶಾ ಅತ್ಯಾಚಾರ ಆರೋಪಿಗಳ ಪಾಲಕರನ್ನು ಭೇಟಿ ಮಾಡಲಿರುವ ಎನ್ ಎಚ್ ಆರ್ ಸಿ ಸದಸ್ಯರು
ಹೈದರಾಬಾದ್, ಡಿ 8 : ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಏಳು ಸದಸ್ಯರ ತಂಡ ನವದೆಹಲಿಯನ್ನು ತಲುಪಿದ್ದು, ಭಾನುವಾರ ಇತ್ತೀಚೆಗೆ ಸಾಮೂಹಿಕ ಅತ್ಯಾಚಾರ ಹಾಗೂ ಹಲ್ಲೆಗೊಳಗಾದ ಪಶುವೈದ್ಯೆ ದಿಶಾ ಕುಟುಂಬ ಸದಸ್ಯರನ್ನು ಭೇಟಿಯಾಗುವ ಸಾಧ್ಯತೆಯಿದೆ. ಪ್ರಸ್ತುತ ಹೈದರಾಬಾದ್ ನ ಸರ್ಧಾರ್ ವಲ್ಲಭಬಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿರುವ ಆಯೋಗದ ಸದಸ್ಯರು ಎನ್ ಕೌಂಟರ್ ನಲ್ಲಿ ಗಾಯಗೊಂಡಿರುವ ಇಬ್ಬರು ಪೊಲೀಸರನ್ನು ಪ್ರಶ್ನಿಸಲಿದ್ದಾರೆ ಎನ್ನಲಾಗಿದೆ. ದಿಶಾ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ ಸಂಬಂಧ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಈಗಾಗಲೇ ಅವರು ಮಹಬೂಬನಗರ ಆಸ್ಪತ್ರೆಯಲ್ಲಿ ಇರಿಸಲಾಗಿರುವ ಮೃತದೇಹಗಳನ್ನು ಪರೀಕ್ಷಿಸಿದ್ದಾರೆ. ದಿಶಾಳನ್ನು ಹತ್ಯೆ ಮಾಡಲಾಗಿದೆ ಎನ್ನಲಾದ ಸ್ಥಳವನ್ನು ಕೂಡ ಪರಿಶೀಲಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 