ದೆಹಲಿಯಲ್ಲಿ ಜರುಗಲ್ಲ ಐಪಿಎಲ್ ಪಂದ್ಯಗಳು:ಸಿಸೋಡಿಯಾ
ನವದೆಹಲಿ, ಮಾ13 :ದೇಶದಲ್ಲಿ ಪ್ರಸ್ತುತ ಕೊರೊರಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಐಪಿಎಲ್ ಸೇರಿದಂತೆ ರಾಷ್ಟ್ರರಾಜಧಾನಿಯಲ್ಲಿ ಯಾವುದೇ ಕ್ರೀಡಾ ಚಟುವಟಿಕೆಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಈ ಬಾರಿಯ ಐಪಿಎಲ್ ನಡೆಯುವ ಕುರಿತು ಅನುಮಾನ ಇನ್ನಷ್ಟು ಹೆಚ್ಚಾದಂತಾಗಿದೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ ಸಿಸೋಡಿಯಾ, "ಐಪಿಎಲ್ ನಂತಹ ಅಪಾರ ಜನ ಸಮೂಹ ಸೇರುವ ಎಲ್ಲ ಕ್ರೀಡಾ ಚಟುವಟಿಕೆಗಳನ್ನು ನಿಷೇಧಿಸಲು ನಾವು ನಿರ್ಧರಿಸಿದ್ದೇವೆ. ಕೊರೊನಾ ವೈರಸ್ ತಡೆಗಟ್ಟಲು ಸಾಮಾಜಿಕ ಅಂತರವು ಮುಖ್ಯವಾಗುತ್ತದೆ" ಎಂದಿದ್ದಾರೆ.ದೆಹಲಿ ಸರ್ಕಾರದ ನಿರ್ಧಾರವನ್ನು ಆಮ್ ಆದ್ಮಿ ಪಕ್ಷದ ಎಂಪಿ ಸಂಜಯ್ ಸಿಂಗ್ ಸಹ ಸ್ವಾಗತಿಸಿದ್ದು, ಕೊರಾನಾ ವೈರಸ್ ತಡೆಗಟ್ಟಲು ಜನ ಸಮೂಹ ಸೇರುವುದನ್ನು ತಡೆಗಟ್ಟುವುದು ಒಂದು ಕ್ರಮವಾಗಿದೆ ಎಂದಿದ್ದಾರೆ. ಮಾರ್ಚ್ 29 ರಂದು ಆರಂಭವಾಗಬೇಕಿರುವ ಐಪಿಎಲ್ ವೇಳಾಪಟ್ಟಿಯಲ್ಲಿ ದೆಹಲಿ ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದ ಆತಿಥ್ಯದಲ್ಲಿ ಏಳು ಪಂದ್ಯಗಳು ನಿಗದಿಯಾಗಿವೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 