ಕರೋನ ನಡುವೆಯೇ ಯುಪಿಯಲ್ಲಿ ಶುರುವಾಯ್ತು ಹಂದಿಜ್ವರ....!!
ಲಕ್ನೋ, ಮಾ 6, ಮಾರಕ ಕರೋನವೈರಸ್ ಆತಂಕದ ನಡುವೆ ಈಗ ಉತ್ತರ ಪ್ರದೇಶದಲ್ಲಿ ಹಂದಿ ಜ್ವರ ಹೆಚ್ಚಾಗಿ ಮೀರತ್ನಲ್ಲಿ ಎಂಟು ಜನ ಸಾವನ್ನಪ್ಪಿರುವುದು ಜನತೆಯನ್ನು ಆತಂಕಕ್ಕೆ ನೂಕಿದೆ. ಒಟ್ಟು 81 ಪಾಸಿಟಿವ್ ಜ್ವರ ಪ್ರಕರಣಗಳು ವರದಿಯಾಗಿವೆ.ಈ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು 20 ಪ್ರಾಂತೀಯ ಸಶಸ್ತ್ರ ಕಾನ್ಸ್ಟಾಬ್ಯುಲರಿ (ಪಿಎಸಿ) ಸಿಬ್ಬಂದಿ ಸೇರಿದಂತೆ 81 ಜನರಲ್ಲಿ ಈ ರೋಗ ಸೋಂಕು ಕಾಣಿಸಿಕೊಂಡಿದೆ ಎಂದು ಖಚಿತ ಪಡಿಸಿದ್ದಾರೆ. 20 ಪಿಎಸಿ ಸಿಬ್ಬಂದಿ ಸೇರಿದಂತೆ 81 ರೋಗಿಗಳು ಹಂದಿ ಜ್ವರಕ್ಕೆ ತುತ್ತಾಗಿದ್ದು 11 ಸಿಬ್ಬಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಇತರ 9 ಪಿಎಸಿ ಜವಾನರನ್ನು 5 ದಿನಗಳ ನಂತರ ಬಿಡುಗಡೆ ಮಾಡಲಾಗುವುದು ಇಲ್ಲಿಯವರೆಗೆ 387 ಜನರ ರಕ್ತದ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದೂ ಅವರು ಹೇಳಿದ್ದಾರೆ. ಈ ಸಾವುಗಳ ಪರಿಶೀಲನೆಗಾಗಿ ಉತ್ತರ ಪ್ರದೇಶ ಸರ್ಕಾರ ಉನ್ನತ ವೈದ್ಯಕೀಯ ತಂಡ ರಚಿಸಿದೆ.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 