ರಾಜ್ಯಸಭೆಯಲ್ಲಿ ಎನ್ಪಿಆರ್, ಎನ್ಆರ್ಸಿ ಗದ್ದಲ: ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ
ನವದೆಹಲಿ, ಫೆ.3, ರಾಷ್ಟ್ರೀಯ ಜನಸಂಖ್ಯೆ ನೋಂದಣಿ (ಎನ್ಪಿಆರ್) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಸಮಸ್ಯೆಗಳನ್ನು ಪ್ರಸ್ತಾಪಿಸಿ ವಿರೋಧ ಪಕ್ಷಗಳು ಸೋಮವಾರ ಭಾರೀ ಗದ್ದಲ, ಕೋಲಾಹಲವೆಬ್ಬಿಸಿದ್ದರಿಂದ ರಾಜ್ಯಸಭಾ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಿದ ಪ್ರಸಂಗ ನಡೆಯಿತು.ಕೆಲವು ಸದಸ್ಯರು ಈ ಸಮಸ್ಯೆಯನ್ನು 267 ನಿಯಮದಡಿ ಚರ್ಚಿಸಲು ಅವಕಾಶ ನೀಡುವಂತೆ ಒತ್ತಾಯಿಸಿದರು. ಆದರೆ ಸಭಾಪತಿ ಎಂ.ವೆಂಕಯ್ಯನಾಯ್ಡು ಅವಕಾಶ ನಿರಾಕರಿಸಿದರು.
ಗುಲಾಮ್ ನಬಿ ಆಜಾದ್, ಆನಂದ್ ಶರ್ಮಾ ಮತ್ತು ಇತರರು ಸೇರಿದಂತೆ ಪ್ರತಿಪಕ್ಷದ ಸದಸ್ಯರು ನಿಯಮ 267 ರ ಅಡಿಯಲ್ಲಿ ನೀಡಿರುವ ನೋಟಿಸ್ಗಳನ್ನು ತಿರಸ್ಕರಿಸಿದ ವೆಂಕಯ್ಯ ನಾಯ್ಡು, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಭಾಷಣದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸದಸ್ಯರಿಗೆ ಈ ವಿಷಯದ ಬಗ್ಗೆ ಮಾತನಾಡಲು ಸಾಕಷ್ಟು ಸಮಯ ಸಿಗುತ್ತದೆ ಎಂದು ಸಮಾಧಾನಪಡಿಸಲು ಯತ್ನಿಸಿದರು.ಬಿಎಸ್ಪಿ ಸದಸ್ಯ ಸತೀಶ್ ಚಂದ್ರ ಮಿಶ್ರಾ ಅವರು ಎನ್ಆರ್ಸಿ ಸಮಸ್ಯೆಗಳನ್ನು ಪ್ರಸ್ತಾಪಿಸಲು ಎದ್ದುನಿಂತಾಗ, ನಾಯ್ಡು ಅವರು ಮಧ್ಯಪ್ರವೇಶಿಸಿ, ಈಗಾಗಲೇ ನೋಟಿಸ್ಗಳ ಕುರಿತು ತೀರ್ಪು ನೀಡಿದ್ದೇನೆ, ಹೀಗಿರುವಾಗ ಈ ವಿಷಯದ ಬಗ್ಗೆ ಮಾತನಾಡಲು ಯಾವುದೇ ಸದಸ್ಯರಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಆಗ ಸತೀಶ್ ಚಂದ್ರ ಮಿಶ್ರಾ ಅವರೊಂದಿಗೆ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ ಆಜಾದ್, ಕಾಂಗ್ರೆಸ್ ಸದಸ್ಯ ಆನಂದ್ ಶರ್ಮಾ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಸದಸ್ಯ ಡೆರೆಕ್ ಒ ’ಬ್ರಿಯಾನ್ ಮತ್ತು ಇತರರು ತಮ್ಮ ಸ್ಥಾನಗಳಲ್ಲಿ ಎದ್ದು ನಿಂತು ಮಾತನಾಡಲು ಅವಕಾಶ ಕೋರಿದರು. ವಿರೋಧ ಪಕ್ಷದ ಸದಸ್ಯರು ತಮ್ಮ ಬೇಡಿಕೆಗಳಿಗೆ ಒತ್ತಾಯಿಸುವಾಗ ಗದ್ದಲ ಏರ್ಪಟ್ಟಾಗ ವೆಂಕಯ್ಯ ನಾಯ್ಡು ಅವರು ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 