ರಾಜ್ಯಸಭೆಯಲ್ಲಿ ಎನ್ಪಿಆರ್, ಎನ್ಆರ್ಸಿ ಗದ್ದಲ: ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ
ನವದೆಹಲಿ, ಫೆ.3, ರಾಷ್ಟ್ರೀಯ ಜನಸಂಖ್ಯೆ ನೋಂದಣಿ (ಎನ್ಪಿಆರ್) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಸಮಸ್ಯೆಗಳನ್ನು ಪ್ರಸ್ತಾಪಿಸಿ ವಿರೋಧ ಪಕ್ಷಗಳು ಸೋಮವಾರ ಭಾರೀ ಗದ್ದಲ, ಕೋಲಾಹಲವೆಬ್ಬಿಸಿದ್ದರಿಂದ ರಾಜ್ಯಸಭಾ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಿದ ಪ್ರಸಂಗ ನಡೆಯಿತು.ಕೆಲವು ಸದಸ್ಯರು ಈ ಸಮಸ್ಯೆಯನ್ನು 267 ನಿಯಮದಡಿ ಚರ್ಚಿಸಲು ಅವಕಾಶ ನೀಡುವಂತೆ ಒತ್ತಾಯಿಸಿದರು. ಆದರೆ ಸಭಾಪತಿ ಎಂ.ವೆಂಕಯ್ಯನಾಯ್ಡು ಅವಕಾಶ ನಿರಾಕರಿಸಿದರು.
ಗುಲಾಮ್ ನಬಿ ಆಜಾದ್, ಆನಂದ್ ಶರ್ಮಾ ಮತ್ತು ಇತರರು ಸೇರಿದಂತೆ ಪ್ರತಿಪಕ್ಷದ ಸದಸ್ಯರು ನಿಯಮ 267 ರ ಅಡಿಯಲ್ಲಿ ನೀಡಿರುವ ನೋಟಿಸ್ಗಳನ್ನು ತಿರಸ್ಕರಿಸಿದ ವೆಂಕಯ್ಯ ನಾಯ್ಡು, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಭಾಷಣದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸದಸ್ಯರಿಗೆ ಈ ವಿಷಯದ ಬಗ್ಗೆ ಮಾತನಾಡಲು ಸಾಕಷ್ಟು ಸಮಯ ಸಿಗುತ್ತದೆ ಎಂದು ಸಮಾಧಾನಪಡಿಸಲು ಯತ್ನಿಸಿದರು.ಬಿಎಸ್ಪಿ ಸದಸ್ಯ ಸತೀಶ್ ಚಂದ್ರ ಮಿಶ್ರಾ ಅವರು ಎನ್ಆರ್ಸಿ ಸಮಸ್ಯೆಗಳನ್ನು ಪ್ರಸ್ತಾಪಿಸಲು ಎದ್ದುನಿಂತಾಗ, ನಾಯ್ಡು ಅವರು ಮಧ್ಯಪ್ರವೇಶಿಸಿ, ಈಗಾಗಲೇ ನೋಟಿಸ್ಗಳ ಕುರಿತು ತೀರ್ಪು ನೀಡಿದ್ದೇನೆ, ಹೀಗಿರುವಾಗ ಈ ವಿಷಯದ ಬಗ್ಗೆ ಮಾತನಾಡಲು ಯಾವುದೇ ಸದಸ್ಯರಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಆಗ ಸತೀಶ್ ಚಂದ್ರ ಮಿಶ್ರಾ ಅವರೊಂದಿಗೆ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ ಆಜಾದ್, ಕಾಂಗ್ರೆಸ್ ಸದಸ್ಯ ಆನಂದ್ ಶರ್ಮಾ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಸದಸ್ಯ ಡೆರೆಕ್ ಒ ’ಬ್ರಿಯಾನ್ ಮತ್ತು ಇತರರು ತಮ್ಮ ಸ್ಥಾನಗಳಲ್ಲಿ ಎದ್ದು ನಿಂತು ಮಾತನಾಡಲು ಅವಕಾಶ ಕೋರಿದರು. ವಿರೋಧ ಪಕ್ಷದ ಸದಸ್ಯರು ತಮ್ಮ ಬೇಡಿಕೆಗಳಿಗೆ ಒತ್ತಾಯಿಸುವಾಗ ಗದ್ದಲ ಏರ್ಪಟ್ಟಾಗ ವೆಂಕಯ್ಯ ನಾಯ್ಡು ಅವರು ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 