ಹರಗಿನಡೋಣಿಯಲ್ಲಿ ಎನ್ಎಸ್ಎಸ್ ಸಪ್ತಾಹ ಆಚರಣೆ
NSS Week Celebration in Haraginadoni
ಬಳ್ಳಾರಿ 08: ಜಿಲ್ಲೆಯ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಹಾನಗಲ್ ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ರಾಷ್ಟ್ರೀಯ ಸ್ವಯಂಸೇವಾ ಯೋಜನೆ (ಎನ್ಎಸ್ಎಸ್) ಸಪ್ತಾಹವನ್ನು ಹರಗಿನಡೋಣಿ ಗ್ರಾಮದ ಶ್ರೀ ಬುಗ್ಗ ಸಿದ್ದಲಿಂಗೇಶ್ವರ ಶಾಲೆಯಲ್ಲಿ ಉದ್ಘಾಟಿಸಲಾಯಿತು.ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಎಚ್.ಎಸ್.ಕೆ. ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
ಶಾಲೆಯ ಶಿಕ್ಷಕಿ ಶ್ರೀಮತಿ ನಿರ್ಮಲಾ ಹಾಗೂ ಸಹ ಶಿಕ್ಷಕರು, ಗ್ರಾಮಸ್ಥ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಮಹಾತ್ಮ ಗಾಂಧೀಜಿಯವರ ಅಹಿಂಸೆ, ಸಹನೆ ಮತ್ತು ಸತ್ಯದ ತತ್ವಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜೊತೆಗೆ ಸ್ವಚ್ಛತೆಯ ಮಹತ್ವವನ್ನು ಅರಿತು ಸಮಾಜದಲ್ಲಿ ಉತ್ತಮ ಸಂದೇಶವನ್ನು ಹರಡಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದ ನಿರೂಪಣೆಯನ್ನು ಎಚ್.ಎಸ್.ಕೆ. ಪಾಲಿಟೆಕ್ನಿಕ್ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ರಾಜೇಶ್ ಕುಮಾರ್ ಜೆ.ಎಂ ಅವರು ನಡೆಸಿಕೊಟ್ಟರು. ವಂದನಾರೆ್ಣಯನ್ನು ಸಮನ್ವಯ ಅಧಿಕಾರಿ ಕೆ. ಪಂಪನಗೌಡರು ಸಲ್ಲಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 