ಎನ್ಎಸ್ಎಸ್ ಶಿಬಿರಗಳು ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಹೆಚ್ಚಿಸುತ್ತವೆ: ಪಾಟೀಲ
NSS camps enhance human values in children: Patil
ವಿಜಯಪುರ 05: ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನದ ಜೊತೆಗೆ ಸಹಬಾಳ್ವೆ, ಸಂಘಟನೆ, ಸಮಾಧಾನ ಸೇರಿದಂತೆ ಮಾನವೀಯ ಮೌಲ್ಯಗಳನ್ನು ಹೆಚ್ಚಿಸುತ್ತವೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಹೇಳಿದ್ದಾರೆ.
ಬುಧವಾರ ತಿಕೋಟಾ ತಾಲೂಕಿನ ಸಿದ್ದಪೂರ ಕೆ ಗ್ರಾಮದಲ್ಲಿ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಆಯೋಜಿಸಲಾದ ವಿಶೇಷ ಶಿಬಿರದಲ್ಲಿ ಅವರು ಹೇಳಿದರು.
ಇಂಥ ಶಿಬಿರಗಳಿಂದ ವ್ಯಕ್ತಿತ್ವ ವಿಕಸನದ ಜೊತೆಗೆ ಸಾಮಾಜಿಕ ಕಳಕಳಿಯನ್ನು ಕಲಿಸುತ್ತವೆ ಎಂದು ಅವರು ತಿಳಿಸಿದರು.
ಎನ್ಎಸ್ಎಸ್ ಯೋಜನಾ ಅಧಿಕಾರಿ ಡಾ. ರಾವಸಾಬ ದೇಶಮುಖ, ವಿಜಯಪುರ ಸರಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯೆ ಡಾ. ಭುವನೇಶ್ವರಿ, ಗ್ರಾಮದ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್. ಎಂ. ಅವಟಿ ಅವರು ಎನ್ಎಸ್ಎಸ್ ಮತ್ತು ಯುವಕರ ಅಭಿವೃದ್ದಿ ಕುರಿತು ಮಾತನಾಡಿದರು.
ಈಶ್ವರಿ ಸ್ವಾಗತಿಸಿದರು. ವಿನಯ ನಿರೂಪಿಸಿ ವಂದಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 