ನಾಡಪ್ರಭು ಕೆಂಪೇಗೌಡರು ಅಪ್ರತಿಮ ನಾಯಕ

ನಾಡಪ್ರಭು ಕೆಂಪೇಗೌಡರು ಅಪ್ರತಿಮ ನಾಯಕ Nadaprabhu Kempegowda is an unparalleled leader

ಹಾವೇರಿ 27 : ನಾಡಪ್ರಭು ಕೆಂಪೇಗೌಡರು ಅಪ್ರತಿಮ ನಾಯಕರು ಹಾಗೂ ಬೆಂಗಳೂರು ನಗರ ನಿರ್ಮಾಣಮಾಡಿದವರು ಎಂದು ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ ಅವರು ಹೇಳಿದರು. 

ಹಾವೇರಿ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ  ಆಯೋಜಿಸಲಾದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆಮಾಡಿ ಅವರು ಮಾತನಾಡಿದರು. 

ನೂರಾರು ಕೆರೆಗಳನ್ನು  ಹಾಗೂ ಹಲವಾರು ದೇವಸ್ಥಾನಗಳನ್ನು ಕಟ್ಟಿಸಿದ್ದರು.  ಅವರು ಉತ್ತಮ ಆಡಳಿತಗಾರರಾಗಿದ್ದರು.  ವಿದ್ಯಾರ್ಥಿಗಳು ಇಂತಹ ಮಹಾನ್ ನಾಯಕರ ಇತಿಹಾಸವನ್ನು  ತಿಳಿದುಕೊಳ್ಳಬೇಕು ಎಂದು ಹೇಳಿದರು.  

ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾರುತಿ ಶಿಡ್ಲಾಪೂರ ಅವರು ಕೆಂಪೇಗೌಡರ ಜೀವನದ ಕುರಿತು ಉಪನ್ಯಾಸ ನೀಡಿದರು. 

ಕಾರ್ಯಕ್ರಮದಲ್ಲಿ ನಗರಸಭೆ  ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ  ಎಂ.ಎಂ.ಮೈದೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್‌.ವಿ.ಚಿನ್ನಿಕಟ್ಟಿ, ಉಪ ತಹಶೀಲ್ದಾರ ಅಮೃತಗೌಡ ಪಾಟೀಲ,  ಪಿ.ಎಸ್‌. ಡಂಬಳ್ಳಿ, ಆರ್‌.ಕೆ.ರಾಜಾನಾಯ್ಕ ಇತರರು ಉಪಸ್ಥಿತರಿದ್ದರು.