ಎಪಿಎಂಸಿ ಅಧ್ಯಕ್ಷರಾಗಿ ನಾಗರಾಜ್ ಚಳ್ಳೋಳ್ಳಿ ಆಯ್ಕೆ
ಲೋಕದರ್ಶನ ವರದಿ
ಕೊಪ್ಪಳ 31: ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನೂತನ ಅಧ್ಯಕ್ಷರಾಗಿ ನಾಗರಾಜ್ ಚಳ್ಳೋಳ್ಳಿಯವರು ಶುಕ್ರವಾರದಂದು ಆಯ್ಕೆಗೊಂಡರು. ಅಧ್ಯಕ್ಷ ಸ್ಥಾನಕ್ಕೆ ಜಡಿಯಪ್ಪ ಬಂಗಾಳಿ ರಾಜಿನಾಮೆ ನೀಡಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗರಾಜ್ ಚಳ್ಳೋಳ್ಳಿಯವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆಯನ್ನು ತಹಶೀಲ್ದಾರ ಹಾಗೂ ಚುನಾವಣಾಧಿಕಾರಿ ಜೆ.ಬಿ.ಮಜ್ಜಿಗಿ ಘೋಷಿಸಿದರು.
ನಂತರ ನೂತನ ಅಧ್ಯಕ್ಷ ನಾಗರಾಜ್ ಚಳ್ಳೋಳ್ಳಿ ಪತ್ರಿಕೆಯೊಂದಿಗೆ ಮಾತನಾಡಿ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು, ಎಪಿಎಂಸಿ ಸಮಗ್ರ ಅಭಿವೃದ್ದಿಗೆ ಎಲ್ಲಾ ಸದಸ್ಯರ ಸಲಹೆ-ಸೂಚನೆಯ ಮೇರೆಗೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಮನಗೌಡ ಪೋ.ಪಾಟೀಲ್, ಸದಸ್ಯರಾದ ಹನುಮರಡ್ಡಿ ಹಂಗನಕಟ್ಟಿ, ವೆಂಕನಗೌಡ ಹಿರೇಗೌಡ್ರ,ಜಡಿಯಪ್ಪ ಬಂಗಾಳಿ, ವೆಂಕಣ್ಣ ವರಕನಹಳ್ಳಿ, ಚೌಡಪ್ಪ ಜಂತ್ಲಿ, ಗೌರಮ್ಮ ಪೊಲೀಸ್ಪಾಟೀಲ್, ಜಿ.ವಿಶ್ವನಾಥರಾಜು, ನೇಮರಡ್ಡಿ ಮೇಟಿ, ಶ್ರೀಶೈಲಪ್ಪ ಅಂಗಡಿ, ಕಾರ್ಯದಶರ್ಿ ಸಿದ್ದಯ್ಯಸ್ವಾಮಿ ಉಪಸ್ಥಿತರಿದ್ದರು.
ಮಾಜಿ ಶಾಸಕ ಕೆ.ಬಸವರಾಜ್ ಹಿಟ್ನಾಳ್, ಜಿ.ಪಂ. ಮಾಜಿ ಅಧ್ಯಕ್ಷರು ಹಾಗೂ ಸದಸ್ಯರಾದ ಎಸ್.ಬಿ.ನಾಗರಳ್ಳಿ,ಕೆ.ರಾಜಶೇಖರ ಹಿಟ್ನಾಳ್, ಸೈಯದ್ಜುಲ್ಲು ಖಾದ್ರಿ, ಸೇರಿದಂತೆ ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನೂತನ ಅಧ್ಯಕ್ಷ ನಾಗರಾಜ್ ಚಳ್ಳೋಳ್ಳಿಯನ್ನು ಅಭಿನಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 