ಸರಸ್ವತಿ ಸಾಧಕಸಿರಿ ರಾಷ್ಟ್ರ ಪ್ರಶಸ್ತಿ ಪಡೆದ: ನಾಗರಾಜ ಭಜಂತ್ರಿ
Nagaraja Bhajantri receives Saraswati Sadhakasiri National Award
ಮಹಾಲಿಂಗಪುರ 28: ನಗರದ ಶ್ರೀರಾಮ ಸೇನಾ ಹಿಂದೂಸ್ತಾನ್ ಜಿಲ್ಲಾಧ್ಯಕ್ಷ ನಾಗರಾಜ ಮಹಾದೇವ ಭಜಂತ್ರಿಯವರು ಕನ್ನಡ ನಾಡು ನುಡಿ, ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ,ಹೀಗೆ ಲಲಿತ ಕಲೆಗಳ ಎಲ್ಲಾ ಪ್ರಕಾರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದನ್ನು ಪರಿಗಣಿಸಿ “ದಾವಣಗೆರೆಯ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ” ವತಿಯಿಂದ 70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ “ಸರಸ್ವತಿ ಸಾಧಕಸಿರಿ” ರಾಷ್ಟ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಮುಂದಿನ ದಿನಮಾನಗಳಲ್ಲಿ ರಾಜ್ಯ ,ರಾಷ್ಟ್ರ, ಅಂತರಾಷ್ಟ್ರೀಯ, ಮಟ್ಟದಲ್ಲಿ ಸಾಧನೆ ಮಾಡಿ ಹೆತ್ತ ತಂದೆ-ತಾಯಿ ಪೋಷಕರಿಗೆ, ಅಕ್ಷರಭ್ಯಾಸ, ನೀಡಿದ ಗುರುಗಳಿಗೆ ಹುಟ್ಟಿದ ಊರಿಗೆ ಕೀರ್ತಿ ತರಲೆಂದು ಶುಭ ಹಾರೈಸಿ ಅಭಿಮಾನದಿಂದ ಅಭಿನಂದಿಸಿ ಸನ್ಮಾನ ಪತ್ರ ನೀಡಿ ಗೌರವಿಸಿದ್ದಾರೆ. ನಗರದ ಸ್ನೇಹಿತ ಬಳಗದವರಾದ ಮಹಾಲಿಂಗ ಕಲಾಲ, ಅರ್ಜುನ ಪವಾರ, ಮಂಜುನಾಥ ಭಾವಿಕಟ್ಟಿ, ಶಿವು ಸಣ್ಣಕ್ಕಿ, ನಂದೇಶ ಲಾತುರ,ಅನಿಲ ಕವಾಸಿ,ಸುದೀಪ ಮೇಟಿ, ಆಕಾಶ ನಾವಿ,ಚೇತನ ಬಂಡಿವಡ್ಡರ,ಮಹಾಲಿಂಗ ಲಾತುರ, ಸಿದ್ದು ಹುದ್ದಾರ, ಆನಂದ ನುಲಿ, ರಾಷ್ಟ್ರ ಪ್ರಶಸ್ತಿ ಸಿಕ್ಕ ಹಿನ್ನೆಲೆ ಸಂತೋಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಇದೇ ಸಂದರ್ಭದಲ್ಲಿ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ ಶೆಣೈ, ಅಧ್ಯಕ್ಷ ಡಾ ನಾಗೇಶ ಸಂಜೀವ ಕಿಣೆ, ಪ್ರ ಕಾರ್ಯದರ್ಶಿ ರಾಘವೇಂದ್ರ ಶೆಣೈ,ಸೇರಿದಂತೆ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ಸರ್ವಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 