ನಗೆ ಬೇಕರಿ-ನಗಬೇಕ್ರಿ ವಿನೂತನ ಕಾರ್ಯಕ್ರಮ: ಪ್ರಮುಖ ಭಾಷಣಕಾರರಾಗಿ ಹನಿಗವಿ ಎಚ್. ಡುಂಡಿರಾಜ್
Nage Bakery-Nagabekri innovative programme: Hanigavi H. Manjunath will be the keynote speaker: Dundi
ಬೆಳಗಾವಿ 13: ನಗರದ ಹಾಸ್ಯಕೂಟ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಇದೆ ದಿ. 17 ಗುರುವಾರ ಸಾ. 4.30 ಕ್ಕೆ ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ ನಗೆ ಬೇಕರಿ-ನಗಬೇಕ್ರಿ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಪ್ರಮುಖ ಭಾಷಣಕಾರರಾಗಿ ಬೆಂಗಳೂರಿನ ಖ್ಯಾತ ಹನಿಗವಿ ಎಚ್ ಡುಂಡಿರಾಜ್ ಅವರು ಆಗಮಿಸಲಿದ್ದಾರೆ. ಹಿರಿಯ ನಗೆ ಮಾತುಗಾರರರಾದ ಪ್ರೊ. ಜಿ. ಕೆ. ಕಲಕರ್ಣಿ ಹಾಗೂ ಯುವ ಪ್ರತಿಭೆ ಕೆ. ತಾನಾಜಿ ತಮ್ಮ ಮಾತುಗಳಿಂದ ಜನರನ್ನು ರಂಜಿಸಲಿದ್ದಾರೆ.
ಅಧ್ಯಕ್ಷತೆಯನ್ನು ಖ್ಯಾತ ನ್ಯಾಯವಾದಿ ಎಸ್. ಎಂ. ಕುಲಕರ್ಣಿಯವರು ವಹಿಸಿಕೊಳ್ಳಲಿದ್ದು ಅತಿಥಿಗಳಾಗಿ ರಂಗಸಂಪದದ ಅಧ್ಯಕ್ಷ ಡಾ. ಅರವಿಂದ ಕುಲಕರ್ಣಿಯವರು ಆಗಮಿಸಲಿದ್ದಾರೆ. ಪ್ರಾಯೋಜಕತ್ವವನ್ನು ಭಾರತೀಯ ಸ್ಟೇಟ್ ಬ್ಯಾಂಕ್ ನಿವೃತ್ತ ಶಾಖಾಧಿಕಾರಿ ಅರವಿಂದ ಹುನಗುಂದ ವಹಿಸಿಕೊಂಡಿದ್ದಾರೆ. ಪ್ರಾಸ್ತಾವಿಕ ನುಡಿಯನ್ನು ಹಾಸ್ಯಕೂಟ ಸಂಚಾಲಕ ಗುಂಡೇನಟ್ಟಿ ಮಧುಕರ ಆಡಲಿದ್ದಾರೆ.
ಪ್ರವೇಶ ಉಚಿತವಾಗಿದ್ದು ಹಾಸ್ಯಪ್ರಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಕ್ಕು ಹಗುರಾಗುವಂತೆ ಕ.ಸಾ. ಭವನ ವಿಶ್ವಸ್ತ ಮಂಡಳಿಯ ಗೌರವ ಕಾರ್ಯದರ್ಶಿ ರಾಮಚಂದ್ರ ಕಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 