ಪಿಡಿಓ ಆಫ್ ದಿ ಮಂತ್ ಪ್ರಶಸ್ತಿಗೆ ನಾಗೇಂದ್ರ ನಾಯ್ಕ ಭಾಜನ
Nagendra Nayka selected for PDO of the Month Award
ಕಾರವಾರ 07: ಜೂನ್-2025 ಮಾಹೆಯ “ಬೆಸ್ಟ್ ಪಿಡಿಓ ಆಪ್ ದಿ ಮಂತ್” ಪ್ರಶಸ್ತಿಗೆ ಭಾಜನರಾದ ಅಂಕೋಲಾ ತಾಲೂಕಿನ ಬೊಬ್ರವಾಡ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ನಾಗೇಂದ್ರ ಮಹಾದೇವ ನಾಯ್ಕ ಅವರಿಗೆ ನಗರದ ಜಿಲ್ಲಾ ಪಂಚಾಯತ ಕೇಸ್ವಾನ್ ಹಾಲ್ನಲ್ಲಿ ಸೋಮವಾರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಅವರು ಪ್ರಶಸ್ತಿ ನೀಡಿ, ಅಭಿನಂದಿಸಿದರು.
ಬಳಿಕ ಸಿಇಓ ಮಾತನಾಡಿ, ಉತ್ತರ ಕನ್ನಡ ಜಿಲ್ಲಾ ಪಂಚಾಯತನ ಎಲ್ಲ ಪಿಡಿಓಗಳು ತುಂಬ ಚೆನ್ನಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದು, ನಮ್ಮ ಜಿಲ್ಲಾ ಪಂಚಾಯತ ಕರ್ನಾಟಕದ ಪ್ರಮುಖ ಐದರಲ್ಲಿ ಒಂದು ಎಂದು ಗುರುತಿಸಲು ಪಿಡಿಓಗಳ ಕಾರ್ಯ ಮಹತ್ತರವಾಗಿದೆ. ಹಾಗಾಗಿ ಅವರುಗಳನ್ನು ಗುರುತಿಸಿ ಸತ್ಕಾರ ಮಾಡಿ, ಅಭಿನಂದಿಸುವುದರಿಂದ ಎಲ್ಲರಲ್ಲಿ ಕಾರ್ಯಪ್ರವರ್ತತೆ ಹೆಚ್ಚಿಸಲು ಸಾಧ್ಯವೆಂದು ಹೇಳಿದರು.
ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ಕರೀಂ ಆಸದಿ, ಆಡಳಿತ ಶಾಖೆಯ ಸಹಾಯಕ ನಿರ್ದೇಶಕ ವೆಂಕಟ್ರಾಯ ನಾಯ್ಕ, ಸಹಾಯಕ ಯೋಜನಾ ಅಧಿಕಾರಿ ಕೃಷ್ಣಾ ಶಾಸ್ತ್ರಿ ಹಾಗೂ ಲೆಕ್ಕ ಅಧಿಕ್ಷಕ ಸೂರ್ಯಕಾಂತ ಸೇರಿದಂತೆ ಜಿಲ್ಲಾ ಪಂಚಾಯತ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 