ನಾಗೇಶ್ ಜೆ. ನಾಯಕ ಅವರಿಗೆ ರಾಜ್ಯಮಟ್ಟದ ಅಪ್ಪ ಪ್ರಶಸ್ತಿ
Nagesh J. Nayak gets state-level Dad Award
ಸವದತ್ತಿ 21: ಪಟ್ಟಣದ ಶಿವಬಸವ ನಗರದ ಶಿಕ್ಷಕ, ಕವಿ, ವಿಮರ್ಶಕ ನಾಗೇಶ್ ಜೆ. ನಾಯಕ ಅವರಿಗೆ ರಾಜ್ಯಮಟ್ಟದ ‘ಅಪ್ಪ’ ಪ್ರಶಸ್ತಿ ಲಭಿಸಿದೆ. ಯಾದಗಿರಿ ಜಿಲ್ಲೆಯ ಶಹಾಪೂರಿನ ದಿ. ಶ್ರೀ ಯಂಕೋಬ ದೊರೆ ಸ್ಮರಣಾರ್ಥ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನಾಡಿನ ಸಾಧಕರಿಗೆ ಕೊಡಮಾಡುವ ಪ್ರಶಸ್ತಿ ಇದಾಗಿದ್ದು, ನಾಗೇಶ್ ಜೆ. ನಾಯಕ ಅವರ ಸಾಹಿತ್ಯಿಕ ಸಾಧನೆಗೆ ಈ ಗೌರವ ಪುರಸ್ಕಾರ ಲಭಿಸಿದೆ. ದಿನಾಂಕ 26 ರಂದು ಶಹಾಪೂರಿನಲ್ಲಿ ನಡೆಯುವ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾಗಿರುವ ಶರಣಬಸಪ್ಪಗೌಡ ದರ್ಶನಾಪೂರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕಳೆದ 25 ವರ್ಷಗಳಿಂದ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಬರವಣಿಗೆ ಮಾಡುತ್ತಿರುವ ನಾಗೇಶ್ ನಾಯಕ 27 ಕೃತಿಗಳನ್ನು ರಚಿಸಿದ್ದಾರೆ. ದಸರಾ ಉತ್ಸವ, ರನ್ನ ಉತ್ಸವ, ಕಿತ್ತೂರು ಉತ್ಸವ, ಹಂಪಿ ಉತ್ಸವ, ಇಟಗಿ ಉತ್ಸವ, ಅಖಿಲ ಭಾರತ ಸಾಹಿತ್ಯ ಸಮ್ಮೇಳನ, ಆಳ್ವಾಸ್ ನುಡಿಸಿರಿ ಸಮ್ಮೇಳನ, ದೂರದರ್ಶನ, ರೇಡಿಯೋ ಕಾರ್ಯಕ್ರಮ ಸೇರಿದಂತೆ ನಾಡಿನ ಅನೇಕ ಕಡೆಗಳಲ್ಲಿ ಕವಿತೆ ವಾಚನ ಮಾಡಿದ್ದಾರೆ. ನಾಡಿನ ಪ್ರತಿಷ್ಠಿತ ಅಮ್ಮ ಪ್ರಶಸ್ತಿ ಸೇರಿದಂತೆ ಅನೇಕ ಪುಸ್ತಕ ಬಹುಮಾನ, ಗೌರವ ಪುರಸ್ಕಾರಗಳು ಇವರಿಗೆ ಸಂದಿವೆ. ಚಂದನ ಟಿ.ವಿ.ಯ ಬೆಳಗು, ಶುಭೋದಯ ಕಾರ್ಯಕ್ರಮದ ನೇರ ಸಂದರ್ಶನದಲ್ಲಿ ಪಾಲ್ಗೊಂಡಿದ್ದಾರೆ. ಸತತ ನಾಲ್ಕು ವರ್ಷಗಳಿಂದ ಉದಯಕಾಲ ಪತ್ರಿಕೆಯಲ್ಲಿ ಇವರ ‘ಕಾಡುವ ಕವಿತೆ’ ಎಂಬ ಅಂಕಣ ಪ್ರಕಟವಾಗುತ್ತಿದ್ದು ಓದುಗರ ಮೆಚ್ಚುಗೆ ಗಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 