ನಾಗಪುರ: ನಾಮಪತ್ರ ಸಲ್ಲಿಸಿದ ಗಡ್ಕರಿ
ನಾಗಪುರ, ಮಾ. 25 : ಬಿಜೆಪಿ ಹಿರಿಯ ನಾಯಕ, ಕೇಂದ್ರ ಸಚಿವ ನಿತಿನ್ ಗಡ್ಕರಿ ಇಂದು 17 ನೇ ಲೋಕಸಭಾ ಚುನಾವಣೆಗಾಗಿ ನಾಗಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.
ಸಚಿವ ಗಡ್ಕರಿ ಅವರ ಜೊತೆ ರಾಮ್ಟೆಕ್ ಲೋಕಸಭಾ ಕ್ಷೇತ್ರದಿಂದ ಶಿವಸೇನೆಯ ಕ್ರುಪಾಲ್ ಟ್ಯುಮೇನ್ ಅವರು ಕೂಡ ಉಮೇದುವಾರಿಕೆ ಸಲ್ಲಿಸಿದರು. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಬಿಜೆಪಿ-ಶಿವಸೇನೆಯ ಸಾವಿರಾರು ಕಾರ್ಯಕರ್ತರು ಇಬ್ಬರು ನಾಯಕರ ನಾಮಪತ್ರ ಸಲ್ಲಿಕೆಯ ಸಮಯದಲ್ಲಿ ಹಾಜರಿದ್ದರು.
ಬಳಿಕ ಮಾತನಾಡಿದ ಗಡ್ಕರಿ ಅವರು, ಬಿಜೆಪಿ ಸರಕಾರದ ಅಧಿಕಾರಾವಧಿಯಲ್ಲಿ ಹಲವು ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡಲಾಗಿದೆ. ಇದರಿಂದ ಗೆಲುವಿನ ಬಗ್ಗೆ ಯಾವುದೇ ಅಳಕು ಇಲ್ಲ ಎಂದು ವಿಶ್ವಾಸದಿಂದ ಹೇಳಿದರು.
ಇದಕ್ಕೆ ಪ್ರತಿಯಾಗಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾನಾ ಪಟೋಲ್ ಮತ್ತು ಕಿಶೋರ್ ಗಜ್ಬಿಯಾ ಕ್ರಮವಾಗಿ ನಾಗಪುರ ಮತ್ತು ರಾಮ್ಟೆಕ್ ಕ್ಷೇತ್ರಗಳಿಂದ ನಾಮಪತ್ರ ಸಲ್ಲಿಸಿದರು.
ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ತಪ್ಪು ಆರ್ಥಿಕ ನೀತಿ, ಜನವಿರೋಧಿ ರೈತ ವಿರೋಧಿ ನೀತಿ ವಿಷಯ ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಗೆಲ್ಲುತ್ತೇವೆ. ಶ್ರೀಮಂತರು ಮತ್ತು ಬಡವರ ನಡುವೆ ಅಸಮಾನತೆ ಹೆಚ್ಚಿದೆ ಎಂದು ಪಟೋಲ್ ಹೇಳಿದರು. ಏಪ್ರಿಲ್ 11ರಂದು ನಡೆಯಲಿರುವ ಲೋಕಸಭೆಯ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 