ನಾಗಪುರ: ನಾಮಪತ್ರ ಸಲ್ಲಿಸಿದ ಗಡ್ಕರಿ
ನಾಗಪುರ, ಮಾ. 25 : ಬಿಜೆಪಿ ಹಿರಿಯ ನಾಯಕ, ಕೇಂದ್ರ ಸಚಿವ ನಿತಿನ್ ಗಡ್ಕರಿ ಇಂದು 17 ನೇ ಲೋಕಸಭಾ ಚುನಾವಣೆಗಾಗಿ ನಾಗಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.
ಸಚಿವ ಗಡ್ಕರಿ ಅವರ ಜೊತೆ ರಾಮ್ಟೆಕ್ ಲೋಕಸಭಾ ಕ್ಷೇತ್ರದಿಂದ ಶಿವಸೇನೆಯ ಕ್ರುಪಾಲ್ ಟ್ಯುಮೇನ್ ಅವರು ಕೂಡ ಉಮೇದುವಾರಿಕೆ ಸಲ್ಲಿಸಿದರು. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಬಿಜೆಪಿ-ಶಿವಸೇನೆಯ ಸಾವಿರಾರು ಕಾರ್ಯಕರ್ತರು ಇಬ್ಬರು ನಾಯಕರ ನಾಮಪತ್ರ ಸಲ್ಲಿಕೆಯ ಸಮಯದಲ್ಲಿ ಹಾಜರಿದ್ದರು.
ಬಳಿಕ ಮಾತನಾಡಿದ ಗಡ್ಕರಿ ಅವರು, ಬಿಜೆಪಿ ಸರಕಾರದ ಅಧಿಕಾರಾವಧಿಯಲ್ಲಿ ಹಲವು ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡಲಾಗಿದೆ. ಇದರಿಂದ ಗೆಲುವಿನ ಬಗ್ಗೆ ಯಾವುದೇ ಅಳಕು ಇಲ್ಲ ಎಂದು ವಿಶ್ವಾಸದಿಂದ ಹೇಳಿದರು.
ಇದಕ್ಕೆ ಪ್ರತಿಯಾಗಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾನಾ ಪಟೋಲ್ ಮತ್ತು ಕಿಶೋರ್ ಗಜ್ಬಿಯಾ ಕ್ರಮವಾಗಿ ನಾಗಪುರ ಮತ್ತು ರಾಮ್ಟೆಕ್ ಕ್ಷೇತ್ರಗಳಿಂದ ನಾಮಪತ್ರ ಸಲ್ಲಿಸಿದರು.
ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ತಪ್ಪು ಆರ್ಥಿಕ ನೀತಿ, ಜನವಿರೋಧಿ ರೈತ ವಿರೋಧಿ ನೀತಿ ವಿಷಯ ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಗೆಲ್ಲುತ್ತೇವೆ. ಶ್ರೀಮಂತರು ಮತ್ತು ಬಡವರ ನಡುವೆ ಅಸಮಾನತೆ ಹೆಚ್ಚಿದೆ ಎಂದು ಪಟೋಲ್ ಹೇಳಿದರು. ಏಪ್ರಿಲ್ 11ರಂದು ನಡೆಯಲಿರುವ ಲೋಕಸಭೆಯ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿದೆ.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 