370ನೇ ವಿಧಿ ರದ್ದು ಸಮರ್ಥಿಸಿಕೊಂಡ ನಾಯ್ಡು, ಅಮಿತ್ ಶಾ
ಚೆನ್ನೈ, ಆಗಸ್ಟ್ 11 ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿರುವುದನ್ನು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸಮರ್ಥಿಸಿಕೊಂಡಿದ್ದಾರೆ. ವೆಂಕಯ್ಯ ನಾಯ್ಡು ಅವರ ಪುಸ್ತಕ ಬಿಡುಗಡೆಯಲ್ಲಿ ಮಾತನಾಡಿದ ಅಮಿತ್ ಶಾ, ಕೇಂದ್ರದ ಈ ನಡೆಯಿಂದ ದೇಶಕ್ಕೆ ಒಳಿತಾಗಲಿದೆ. ಕಾಶ್ಮೀರದಲ್ಲಿ ಭಯೋತ್ಪಾದನೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ ಎಂದರು. ದೇಶದ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಈ ವಿಧೇಯಕ ರದ್ದುಗೊಳಿಸುವ ಅಗತ್ಯವಿತ್ತು ಎಂದು ವೆಂಕಯ್ಯ ನಾಯ್ಡು ತಿಳಿಸಿದರು. ಸಮಸ್ಯೆಯನ್ನು ರಾಷ್ಟ್ರೀಯ ದೃಷ್ಟಿಕೋನದಿಂದಲೂ ನೋಡಬೇಕು. ದೇಶದ ಜನ, ಜಮ್ಮು ಮತ್ತು ಕಾಶ್ಮೀರದವರ ಜೊತೆ ನಿಲ್ಲಬೇಕು ಎಂದು ನಾಯ್ಡು ಕರೆ ನೀಡಿದರು. ರಾಜ್ಯದಲ್ಲಿ ಮಸೂದೆ ಅಂಗೀಕಾರಕ್ಕಾಗಿ ನಾಯ್ಡು ಅವರಿಗೆ ಧನ್ಯವಾದ ಅರ್ಪಿಸಿದ ಅಮಿತ್ ಶಾ, 370ನೇ ವಿಧಿ ರದ್ದುಗೊಳಿಸಿದ್ದು, ಕಾಶ್ಮೀರದಲ್ಲಿ ಭಯೋತ್ಪಾದನೆ ಕೊನೆಗೊಳ್ಳುತ್ತದೆ ಮತ್ತು ಕಾಶ್ಮೀರದ ಪ್ರಗತಿ ಮತ್ತು ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 