ಅಂತಾರಾಷ್ಟ್ರೀಯ ಛಾಯಾಚಿತ್ರ ಪ್ರದರ್ಶನಕ್ಕೆ ನಾಮದೇವ ಅವರ ಮಿಲನ ಕ್ರಿಯೆ ಚಿತ್ರ ಆಯ್ಕೆ
ಲೋಕದರ್ಶನವರದಿ
ರಾಣೇಬೆನ್ನೂರು12: ನಗರದ ಖ್ಯಾತ ವ್ಯಂಗ್ಯಚಿತ್ರಕಾರ ಹಾಗೂ ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕರಾದ ನಾಮದೇವ ಕಾಗದಗಾರ ಅವರ ನಿಸರ್ಗ ವಿಭಾಗದ ಚಿತ್ರ ಅಂತಾಷ್ಟ್ರೀಯ ಪ್ರದರ್ಶನಕ್ಕೆ ಆಯ್ಕೆಯಾಗಿದೆ.
ಇತ್ತೀಚಿಗೆ ಪಶ್ಚಿಮ ಬಂಗಾಳದ ಪ್ಯಾರಾಮೌಂಟ್ ಫೋಟೋಗ್ರಾಫಿಕ್ ಸಕ್ಯರ್ೂಟ್, ಗ್ರೀಸ್ ದೇಶದ ಇಂಟರ್ ನ್ಯಾಷನಲ್ ಫೆಡರೇಷನ್ ಆಫ್ ಫೋಟೋಗ್ರಾಫಿಕ್ ಸಂಸ್ಥೆ, ಹಾಗೂ ಪಾಟ್ನಾದ ಫೆಡರೇಷನ್ ಆಫ್ ಇಂಡಿಯನ್ ಫೋಟೋಗ್ರಾಫಿಕ್ ಸಂಸ್ಥೆಗಳು ಏರ್ಪಡಿಸಿದ್ದ ಅಂತರಾಷ್ಟ್ರೀಯ ಛಾಯಾಚಿತ್ರ ಪ್ರದರ್ಶನಕ್ಕೆ ಹವ್ಯಾಸಿ ಛಾಯಾಗ್ರಾಹಕ ನಾಮದೇವ ಕಾಗದಗಾರ ಸೆರೆಹಿಡಿದ "ದರೋಡೆ ನೊಣಗಳ ಮಿಲನ' ಛಾಯಾಚಿತ್ರವು ನೇಚರ್ ವಿಭಾಗದ ಪ್ರದರ್ಶನಕ್ಕೆ ಆಯ್ಕೆಯಾಗಿದೆ.
ರಾಣೆಬೆನ್ನೂರ ಸಮೀಪದ ಅಳಲಗಿರಿ ಅರಣ್ಯ ಪ್ರದೇಶದಲ್ಲಿ ಈ ದರೋಡೆ ನೊಣಗಳ ಮಿಲನಕ್ರಿಯೆ ಛಾಯಾಚಿತ್ರವನ್ನು ನಾಮದೇವ ಕಾಗದಗಾರ ಸೆರೆಹಿಡಿದಿದ್ದರು. ಜಗತ್ತೀನ 33 ಕ್ಕೂ ಹೆಚ್ಚು ದೇಶದ ಛಾಯಾಗ್ರಾಹಕರ 800 ಕ್ಕೂ ಹೆಚ್ಚು ಛಾಯಾಚಿತ್ರಗಳು ಪ್ರದರ್ಶನಗೊಳ್ಳಲಿವೆ.
ನಾಮದೇವ ಅವರ ಸಾಧನೆಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ವಲಯ ಅರಣ್ಯಾಧಿಕಾರಿ ಮಹಾಂತೇಶ ನ್ಯಾಮ್ತಿ, ಹವ್ಯಾಸಿಗಳಾದ ಚಂದ್ರು ಶಿಡೇನೂರ, ಹರೀಶ ಬಡಿಗೇರ, ಸಾಹಿತಿಗಳಾದ ಬಿ.ಶ್ರೀನಿವಾಸ, ಚಂ.ಸು ಪಾಟೀಲ, ಇಂದಿರಾ ಕೊಪ್ಪದ ಸೇರಿದಂತೆ ಮತ್ತಿರರು ಅಭಿನಂದನೆ ಸಲ್ಲಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 