ಆಯನೂರಿನ ಮಸೀದಿಯಲ್ಲಿ ನಮಾಜ್: ಏಳು ಮಂದಿಗೆ ಜ್ವರ ಪತ್ತೆ
ಶಿವಮೊಗ್ಗ, ಏ 3,ಲಾಕ್ಡೌನ್ ಮತ್ತು ನಿಷೇಧಾಜ್ಞೆ ಆದೇಶ ಉಲ್ಲಂಘಿಸಿ ಮಸೀದಿಯೊಂದರಲ್ಲಿ ಜಮಾಜ್ಗೆ ಒಟ್ಟು ಸೇರಿದ್ದ 77 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು, ಕ್ವಾರಂಟೈನ್’ನಲ್ಲಿ ಇರಿಸಿದ್ದಾರೆ. ನಮಾಜ್’ನಲ್ಲಿ ಭಾಗಿಯಾದವರ ಪೈಕಿ ಏಳು ಮಂದಿಯಲ್ಲಿ ಜ್ವರದ ಲಕ್ಷಣ ಇರುವುದು ಬೆಳಕಿಗೆ ಬಂದಿದೆ. ಜಿಲ್ಲೆಯ ಆಯನೂರು ಸಮೀಪದ ಕೆಸವಿನಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರದ ನಮಾಜ್ ಮಾಡಲು 70ಕ್ಕೂ ಹೆಚ್ಚು ಮಂದಿ ಸೇರಿದ್ದಾರೆ ಎಂಬುದಾಗಿ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.ಏಳು ಮಂದಿಯನ್ನು ಕೂಡಲೆ ಆಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ಉಳಿದ 70 ಮಂದಿಯನ್ನು ಸಮೀಪದ ಶಾಲೆಯೊಂದರ ಕಟ್ಟಡದಲ್ಲಿ ಕ್ವಾರಂಟೈನ್ ವಿಭಾಗದಲ್ಲಿ ಇರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಕುಂಸಿ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 