ನಾಮದೇವ ಸಿಂಪಿ ಸಮಾಜದ ಕುಟುಂಬ ಸಮ್ಮೇಳನ ಕಾರ್ಯಕ್ರಮ
Namdev Simpi Society Family Conference Program
ಹಾವೇರಿ 12 : ನಗರದಲ್ಲಿ ಸಂತ ಶಿರೋಮಣಿ ನಾಮದೇವ ಸಿಂಪಿ ಸಮಾಜ ಹಾವೇರಿ ಘಟಕದ ಕುಟುಂಬ ಸಮ್ಮೇಳನ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ನಾಮದೇವ ಸಿಂಪಿ ಸಮಾಜದ ಅಧ್ಯಕ್ಷರಾದ ಹ.ಭ.ಪ ನಾರಾಯಣ ಕೋಪರ್ಡೆ, ರಾಜ್ಯ ಮಹಿಳಾ ಅಧ್ಯಕ್ಷರಾದ ಡಾಽಽ ನಯನಾ ಭಸ್ಮೆ,ರಾಜ್ಯ ಪ್ರಧಾನ ಕಾರ್ಯದಶಿಗಳಾದ ಮುರಳಿಧರ್ ಹಾಸಿಲ್ಕರ್,ರಾಜ್ಯ ಸಂಘಟನಾ ಕಾರ್ಯದಶಿಗಳಾದ ರಾಜೇಶ್ ಮೈಸೂರ್.ಹಾವೇರಿ ನಾಮದೇವ್ ಸಿಂಪಿ ಸಮಾಜದ ಅಧ್ಯಕ್ಷರಾದ ರಮೇಶ್ ಮಳೋದೆ,ಉಪಾಧ್ಯಕ್ಷರಾದ ವಿನಾಯಕ್ ಮಳೋದೆ, ಕಾರ್ಯದಶಿಗಳಾದ ಮುಕುಂದ ಗಂಜಿಗಟ್ಟಿ, ಮಹಿಳಾ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಬಗಾಡೆ ಹಾಗೂ ಸದಸ್ಯರು ಭಾಗವಹಿಸಿದ್ದರು.ಸಭೆಯಲ್ಲಿ ನಾಮದೇವ್ ಸಿಂಪಿ ಸಮಾಜದ ಸಂಘಟನೆಗಾಗಿ ಹಾಗೂ ಸಮಾಜದ ಅಭಿವೃದ್ಧಿಗೆ ಮಹತ್ವ ಕೊಡಲಾಯಿತು. ಸಭೆಯಲ್ಲಿ ಹಾವೇರಿ ಜಿಲ್ಲಾ ನಾಮದೇವ ಸಿಂಪಿ ಸಮಾಜದ ಅಧ್ಯಕ್ಷರಾಗಿ ಜಗದೀಶ್ ಪಾಸ್ತೇಯವರನ್ನು ಆಯ್ಕೆ ಮಾಡಲಾಯಿತು.
ನೂತನ ಪದಾಧಿಕಾರಿಗಳನ್ನು ಹಾಗೂ ಗಣ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು.ಸಭೆಯಲ್ಲಿ ರವಿರಾಜ್ ಕೋಪರ್ಡೆ ಹಾಗೂ ಶ್ರೀಮತಿ ಸುಜಾತ ಕೋಪರ್ಡೆ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ಬೊಂಗಳೆ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 