ಕಲ್ಮಠದಲ್ಲಿ ಡಿ,14 ರವರೆಗೆ ನಮ್ಮೂರ ಉತ್ಸವ ಪ್ರಾರಂಭ
Nammur Utsav begins in Kalmath till December 14
ಬೀಳಗಿ 04: ಶ್ರೀ ಕಲ್ಮಠ ಶ್ರೀಷ,ಬ್ರ.ಲಿಂ.ಗುರುಪಾದ ಶಿವಾಚಾರ್ಯ ಮಹಾಸ್ವಾಮಿಗಳವರ 53ನೇ ಪುಣ್ಯಸ್ಮರೋತ್ಸವ ನಿಮಿತ್ಯವಾಗಿ ಡಿ 4 ರಿಂದ ಡಿ,14 ರವರೆಗೆ ಶ್ರೀ ಕಲ್ಮಠದ ಗುರುಪಾದ ಶಿವಾಚಾರ್ಯ ಮಹಾಸ್ವಾಮಿಜೀಯವರ ನೇತೃತ್ವದಲ್ಲಿ ನಮ್ಮೂರು ಉತ್ಸವ 2024-25ರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
ಡಿ 4 ರಿಂದ ಡಿ,14 ರವರೆಗೆ ಪ್ರತಿದಿನ ಸಂಜೆ 6 ಗಂಟೆಗೆ ತಾಯಿ ಸಜ್ಜಲಗುಡ್ಡದ ಶರಣಮ್ಮನವರ ಜೀವನ ದರ್ಶನ ಪ್ರವಚನ ಕಾರ್ಯಕ್ರಮವು ನಡೆಯಲಿದೆ. ಪ್ರವಚನದ ಉದ್ಘಾಟನಾ ಸಮಾರಂಭವು ಡಿ, 4 ರಂದು ನಡೆಯಲಿದ್ದು ಕಾರ್ಯಕ್ರಮದಲ್ಲಿ ಗಿರಿಸಾಗರ ಕಲ್ಯಾಣ ಹಿರೇಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ. ಬೀಳಗಿ ಸೋಮಪ್ಪಯ್ಯನ ಮಠದ ಚನ್ನಬಸವ ಮಹಾಸ್ವಾಮಿಗಳು ನೇತೃತ್ವ. ದಿಗಂಬರೇಶ್ವರ ಮಠದ ಶೇಷಪ್ಪಯ್ಯ ಸ್ವಾಮಿಗಳು ಸಮುಖ. ದೊಡ್ಡಿಹಾಳ ಬ್ರಹನ್ಮಠ ಶಿವಾನಂದ ದೇವರು. ಹುಚ್ಚಪ್ಪಯ್ಯನ ಮಠದ ಸಿದ್ದಯ್ಯ ಸ್ವಾಮಿಗಳು, ಕುಂದರಗಿ ಜಮ್ ಶುಗರ್ಸ ನಿರ್ದೇಶಕ ರಾಮನಗೌಡ ಜಕ್ಕನಗೌಡ ಅಧ್ಯಕ್ಷತೆ ವಹಿಸುವರು.
ಬೀಳಗಿ ಕೃ.ಮೇ.ಯೋ ವಿಶೇಷ ಭೂಸ್ವಾಧಿನಾಧಿಕಾರಿ ಉದಯ ಕುಂಬಾರ ವೇ.ಮೂ.ಸದಾನಂದ ಶಾಸ್ತ್ರಿಯವರಿಂದ ಪ್ರವಚನ ನುಡಿ, ಮುಖ್ಯ ಅತಿಥಿಗಳಾಗಿ ತಹಶೀಲ್ದಾರ ವಿನೋದ ಹತ್ತಳ್ಳಿ, ಪಪಂ ಮುಖ್ಯಾಧಿಕಾರಿ ದೇವಿಂದ್ರ ಧನಪಾಲ, ಅಖಿಲ ಭಾರತ ಸಾಹಿತ್ಯ ಪರಿಷತ್ ಉಪಾಧ್ಯಕ್ಷ ಶ್ರೀಶೈಲ ಜತ್ತಿ, ಗಣ್ಯರಾದ ವೀರಭದ್ರ್ಪ ನಾಗರಾಳ, ನಿಂಗಯ್ಯ ಸ್ವಾಮಿ ಎಂ.ಗುಂಡಗುರ್ತಿ ಗಾಯಕ. ಅಡವೀಶ ಕುಮಾರ ಪಿ.ಎಮ್.ತಬಲಾ ವಾದಕರು ಹಾಗೂ ಇನ್ನೂ ಅನೇಕ ಗಣ್ಯರು ಈ ನಮ್ಮೂರ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಲ್ಮಠದ ಪೀಠಾಧಿಪತಿ ಶ್ರೀ ಗುರುಪಾದ ಶಿವಾಚಾರ್ಯ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 