'ನಾರನಗೌಡ ಉತ್ತಂಗಿಗೆ ಜಿಲ್ಲಾ ಸಹ ಸಂಚಾಲಕ ಜವಾಬ್ದಾರಿ'
Naranagowda Utthangi is the district co-convener
ಲೋಕದರ್ಶನ ವರದಿ
ಮಹಾಲಿಂಗಪುರ 17 : ಸ್ಥಳೀಯ ನಿವಾಸಿ, ಹೊಸ ದಿಗಂತ ಪತ್ರಿಕೆಯ ವರದಿಗಾರ, ರಾಷ್ಟ್ರೋತ್ಥಾನ ಪರಿಷತ್ ಪ್ರಶಿಕ್ಷಣ ಭಾರತಿ ಸಂಪನ್ಮೂಲ ವ್ಯಕ್ತಿ ನಾರನಗೌಡ ಉತ್ತಂಗಿ ಇವರಿಗೆ ರಾಷ್ಟ್ರೋತ್ಥಾನ ಪರಿಷತ್ತಿನ ಬಾಗಲಕೋಟ ಜಿಲ್ಲಾ ಸಹ ಸಂಚಾಲಕರಾಗಿ ಜವಾಬ್ದಾರಿ ನೀಡಲಾಗಿದೆ.
ಜವಾಬ್ದಾರಿ ನೀಡಿದ ರಾಜ್ಯ ಸಂಚಾಲಕ ಬಸವರಾಜ ಟಿ.ಎಸ್. ರಾಷ್ಟ್ರೋತ್ಥಾನ ಪರಿಷತ್ತಿನ ಶಿಕ್ಷಣ , ಸಾಹಿತ್ಯ, ಆರೋಗ್ಯ, ಸೇವಾ ಕಾರ್ಯಗಳಲ್ಲಿ ನಿರಂತರ ತೊಡಗಿ ಜಿಲ್ಲೆಯಾದ್ಯಂತ ಯಶಸ್ವಿಗೊಳಿಸಲು ಸಂಘಟನೆ, ಆಯೋಜನೆ, ಅನುಷ್ಠಾನದೊಂದಿಗೆ ರಾಷ್ಟ್ರೋತ್ಥಾನ ಪರಿಷತ್ತಿನ 60 ನೇ ವರ್ಷಾಚರಣೆ ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷಾಚರಣೆ ಸಂದರ್ಭದ ಯೋಜನೆಗಳು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಅವಿರತ ಶ್ರಮಿಸಲು ತಿಳಿಸಿದ್ದಾರೆ. ವಿಭಾಗ ಸಂಯೋಜಕ ಶ್ರೀನಿವಾಸ ಪಾಟೀಲ ಜವಾಬ್ದಾರಿ ಹಸ್ತಾಂತರಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 