ಜಿಲ್ಲಾಡಳಿತದಿಂದ ನಾರಾಯಣ ಗುರು ಜಯಂತಿ
ಹಾವೇರಿ13: ಬ್ರಹ್ಮಶ್ರೀ ನಾರಾಯಣಗುರು ಅವರ ಜಯಂತಿಯನ್ನು ಜಿಲ್ಲಾಡಳಿತದಿಂದ ಶುಕ್ರವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಪುಷ್ಪಾರ್ಚನೆ ಮೂಲಕ ಶ್ರದ್ಧಾಪೂರ್ವಕವಾಗಿ ನಮಿಸಿದರು
ನೆರೆ ಹಾಗೂ ಅತಿವೃಷ್ಠಿ ಕಾರಣ ಸಮಾಜದ ಮುಖಂಡರ ಅಭಿಪ್ರಾಯದಂತೆ ಬ್ರಹ್ಮಶ್ರೀ ನಾರಾಯಣಗುರಗಳ ಜಯಂತಿಯನ್ನು ಸರಳವಾಗಿ ಆಯೋಜಿಸಲಾಯಿತು. ಜಯಂತಿಗೆ ಸರಕಾರದಿಂದ ಬಿಡುಗಡೆಯಾದ ಅನುದಾನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ನಿರ್ಧರಿಸಲಾಯಿತು.
ಸರಳ ಸಮಾರಂಭದಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೆಶಕಿ ಶಶಿಕಲಾ ಹುಡೇದ.ಹಾವೇರಿ ಶಹರ ಪೊಲೀಸ್ ಠಾಣೆಯ ಸಿ.ಪಿ.ಐ. ಎಮ್.ಗೌಡ್ಡಪ್ಪಗೌಡ, ರಾಜ್ಯ ಈಡಿಗ ಸಮಾಜದ ಮುಖ್ಯಸ್ಥರಾದ ಸತೀಶ. ಜಿಲ್ಲಾ ಈಡಿಗ ಸಮಾಜದ ಅಧ್ಯಕ್ಷ ಎಮ್.ಎಲ್ ಲಿಂಗರಾಜ ಹಾಗೂ ಇತರ ಸಮಾಜದ ಮುಖಂಡರು ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 