ಜಿಲ್ಲಾಡಳಿತದಿಂದ ನಾರಾಯಣ ಗುರು ಜಯಂತಿ
ಹಾವೇರಿ13: ಬ್ರಹ್ಮಶ್ರೀ ನಾರಾಯಣಗುರು ಅವರ ಜಯಂತಿಯನ್ನು ಜಿಲ್ಲಾಡಳಿತದಿಂದ ಶುಕ್ರವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಪುಷ್ಪಾರ್ಚನೆ ಮೂಲಕ ಶ್ರದ್ಧಾಪೂರ್ವಕವಾಗಿ ನಮಿಸಿದರು
ನೆರೆ ಹಾಗೂ ಅತಿವೃಷ್ಠಿ ಕಾರಣ ಸಮಾಜದ ಮುಖಂಡರ ಅಭಿಪ್ರಾಯದಂತೆ ಬ್ರಹ್ಮಶ್ರೀ ನಾರಾಯಣಗುರಗಳ ಜಯಂತಿಯನ್ನು ಸರಳವಾಗಿ ಆಯೋಜಿಸಲಾಯಿತು. ಜಯಂತಿಗೆ ಸರಕಾರದಿಂದ ಬಿಡುಗಡೆಯಾದ ಅನುದಾನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ನಿರ್ಧರಿಸಲಾಯಿತು.
ಸರಳ ಸಮಾರಂಭದಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೆಶಕಿ ಶಶಿಕಲಾ ಹುಡೇದ.ಹಾವೇರಿ ಶಹರ ಪೊಲೀಸ್ ಠಾಣೆಯ ಸಿ.ಪಿ.ಐ. ಎಮ್.ಗೌಡ್ಡಪ್ಪಗೌಡ, ರಾಜ್ಯ ಈಡಿಗ ಸಮಾಜದ ಮುಖ್ಯಸ್ಥರಾದ ಸತೀಶ. ಜಿಲ್ಲಾ ಈಡಿಗ ಸಮಾಜದ ಅಧ್ಯಕ್ಷ ಎಮ್.ಎಲ್ ಲಿಂಗರಾಜ ಹಾಗೂ ಇತರ ಸಮಾಜದ ಮುಖಂಡರು ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 