ದೇಶದ ಅಭಿವೃದ್ಧಿಗೆ ಮಹತ್ವದ ನಿರ್ಧಾರ : ನರೇಂದ್ರ ಮೋದಿ
Narendra Modi
ನವದೆಹಲಿ, ನ 30 -ದೇಶದ ಸಮಗ್ರ ಅಭಿವೃದ್ಧಿಗೆ ಕಳೆದ ಆರು ತಿಂಗಳ ಅವಧಿಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಈಗಾಗಲೇ ಹಲವು ತೀರ್ಮಾನ ತೆಗೆದುಕೊಂಡಿದ್ದು, ಮುಂದೆಯೂ ಸಾಮಾಜಿಕ ಸಬಲೀಕರಣ ಮತ್ತು ದೇಶದ ಏಕತೆ ಹಾಗೂ ಸಮಗ್ರತೆ ಕಾಪಾಡುವ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವುದಾಗಿ ಅವರು ಪ್ರಕಟಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನವಭಾರತ ನಿರ್ಮಾಣಕ್ಕಾಗಿ ಸರ್ಕಾರ ಸಂಕಲ್ಪ ಮಾಡಿದ್ದು ಅದನ್ನು ಈಡೇರಿಸುವ ಪಣ ತೊಟ್ಟಿದೆ. ಇದಕ್ಕೆ ಜನರ ಸಹಕಾರ ಅತ್ಯಗತ್ಯ ಎಂದು ಅವರು ಮನವಿ ಮಾಡಿದ್ದಾರೆ.
ಸಿಕ್ಸ್ ಮಂತ್ಸ್ ಆಫ್ ಇಂಡಿಯಾ ಫಸ್ಟ್ ಹ್ಯಾಷ್ ಟ್ಯಾಗ್ ನಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಅವರು, ಎಲ್ಲರೊಂದಿಗೆ, ಎಲ್ಲರ ಅಭಿವೃದ್ಧಿ ಎಂಬ ಧ್ಯೇಯ ವಾಕ್ಯವೇ ಸರ್ಕಾರದ ಆಡಳಿತ ಮಂತ್ರವಾಗಿದೆ.
130 ಕೋಟಿ ಜನರ ಆಶೀರ್ವಾದದೊಂದಿಗೆ ಮರಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಸರ್ಕಾರ ಜನರ ಬದುಕನ್ನು ಹಸನಾಗಿಸಲು ಮುಂದೆಯೂ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 