ಶಾಂತೇಶ್ವರ ಕಾಲೇಜಿನಲ್ಲಿ ರಾಷ್ಟ್ರೀಯ ಹಿಂದಿ ದಿವಸ ಆಚರಣೆ
National Hindi Day celebrated at Shanteshwar College
ಶಾಂತೇಶ್ವರ ಕಾಲೇಜಿನಲ್ಲಿ ರಾಷ್ಟ್ರೀಯ ಹಿಂದಿ ದಿವಸ ಆಚರಣೆ
ಇಂಡಿ 15: ಹಿಂದಿ ದಿವಸ ಎಂದು ಜನಪ್ರೀಯವಾಗಿ ಕರೆಯಲ್ಪಡುವ ರಾಷ್ಟ್ರೀಯ ಹಿಂದಿ ದಿನವು ಭಾರತದಾದ್ಯಂತ ಸೆಪ್ಟೆಂಬರ್ 14 ರಂದು ನಡೆಯುವ ವಾರ್ಷಿಕ ಆಚರಣೆಯಾಗಿದೆ. ಹಿಂದಿ ಭಾಷೆಯನ್ನು ಗೌರವಿಸುವ ಮತ್ತು ಉತ್ತೇಜಿಸುವ ನಿಣಾ9ಯಕ ದಿನವೆಂದು ಗುರುತಿಸಲ್ಪಟ್ಟ ಈ ರಾಷ್ಟ್ರೀಯ ಕಾರ್ಯಕ್ರಮವು 1949ರಲ್ಲಿ ಭಾರತದ ಅಧಿಕೃತ ಭಾಷೆಗಳಲ್ಲಿ ಒಂದಾಗಿ ಹಿಂದಿಯನ್ನು ಐತಿಹಾಸಿಕವಾಗಿ ಅಳವಡಿಸಿಕೊಂಡಿದ್ದನ್ನು ಸ್ಮರಿಸುತ್ತದೆ ಎಂದು ವಿಜಯಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕಿ ಡಾ. ಮಹಾದೇವಿ ಸುಂಗಾರೆ ಹೇಳಿದರು.
ಪಟ್ಟಣದ ಶಾಂತೇಶ್ವರ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ "ರಾಷ್ಟ್ರೀಯ ಹಿಂದಿ ದಿವಸ" ಹಾಗೂ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ ಕುರಿತಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಉಪನ್ಯಾಸಕರಾಗಿ ಆಗಮಿಸಿದ ಭಾರತ ಸೇವಾದಳದ ವಲಯ ಸಂಘಟಕ ನಾಗೇಶ ಡೋಣೂರ ಅವರು ರಾಷ್ಟ್ರೀಯ ಭಾವೈಕ್ಯತೆ,ನೈತಿಕ ಮೌಲ್ಯಗಳು ಹಾಗೂ ರಾಷ್ಟ್ರಧ್ವಜದ ಕುರಿತು ಮಾಹಿತಿ ನೀಡಿದರು.
ಶಾಂತೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ನೀಲಕಂಠಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲರಾದ ಆರ್ ಎಸ್ ಬಿರಾದಾರ, ಉಪನ್ಯಾಸಕರಾದ ಆರಿ್ಜ, ಪೂಜಾರಿ, ಫರಾಹರಬ್ಬಾನಿ ಮನಗೂಳಿ, ನಿವೃತ್ತ ಪ್ರಾಂಶುಪಾಲ ಎ,ಬಿ,ಪಾಟೀಲ್, ಎಸ್,ಆರ್,ಪ,ಪೂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಮಹೇಶ್ ಮೇಡೆಗಾರ, ಇನ್ನೂ ಹಲವರು ಉಪಸ್ಥಿತರಿದ್ದರು. ಹಿಂದಿ ಉಪನ್ಯಾಸಕ ಹಾಗೂ ಭಾರತ ಸೇವಾದಳ ಘಟಕದ ಮೇಲ್ವಿಚಾರಕ ವಿಜಯಕುಮಾರ್ ರಾಠೋಡ ಸ್ವಾಗತಿಸಿದರು. ವಿದ್ಯಾರ್ಥಿನಿ ಐಶ್ವರ್ಯ ಹಿರೇಕುರುಬರ ನಿರೂಪಿಸಿದರು. ಹಿರಿಯ ಉಪನ್ಯಾಸಕ ಎಸ್.ಬಿ.ಹಡಪದ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 