ರಾಷ್ಟ್ರೀಯ ಕಾನೂನು ವಿದ್ಯಾಲಯ ತಿದ್ದುಪಡಿ ವಿಧೇಯಕ 2020: ಸರ್ವಾನುಮತದ ಅಂಗೀಕಾರ ನೀಡಿದ ಪರಿಷತ್
ಬೆಂಗಳೂರು, ಮಾ.23,ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ರಾಷ್ಟ್ರೀಯ ಕಾನೂನು ವಿದ್ಯಾಲಯ ತಿದ್ದುಪಡಿ ವಿಧೇಯಕ 2020 ಅನ್ನು ವಿಧಾನ ಪರಿಷತ್ ನಲ್ಲಿಂದು ಸರ್ವಾನುಮತದಿಂದ ಅಂಗೀಕರಿಸಲಾಯಿತು.ವಿಧಾನ ಪರಿಷತ್ ನ ಶಾಸನ ರಚನೆ ಕಲಾಪದಲ್ಲಿ ರಾಷ್ಟ್ರೀಯ ಕಾನೂನು ವಿದ್ಯಾಲಯದಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಶೇ. 25 ರ ಮೀಸಲಾತಿ ಕಲ್ಪಿಸುವ ರಾಷ್ಟ್ರೀಯ ಕಾನೂನು ವಿದ್ಯಾಲಯ ತಿದ್ದುಪಡಿ ವಿಧೇಯಕವನ್ನು ಮಂಡಿಸಿ ಅಂಗೀಕಾರಕ್ಕೆ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮನವಿ ಮಾಡಿದರು.
ವಿಧೇಯಕದ ಮೇಲೆ ಮಾತನಾಡಿದ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ, ಈ ತಿದ್ದುಪಡಿ ವಿಧೇಯಕವನ್ನು ಸ್ವಾಗತಿಸುತ್ತಿದ್ದೇವೆ, ನಾವು ಹಿಂದೆ ಪ್ರಯತ್ನ ಮಾಡಿದ್ದೆವು, ಆದರೆ ಆಗಿರಲಿಲ್ಲ, ಮೊದಲು ಬಿಲ್ ಜಾರಿಗೆ ತರಬೇಕು ನಂತರ ಶೇ. 50 ಕ್ಕೆ ಮೀಸಲಾತಿ ಹೆಚ್ಚಿಸಬೇಕು, ಐಐಟಿ ಸೇರಿ ಇತರೆಡೆಯೂ ಕರ್ನಾಟಕದ ವಿದ್ಯಾರ್ಥಿಗಳಿಗೆ ಮೀಸಲು ಇರಬೇಕು ಆ ರೀತಿ ಪ್ರಯತ್ನಿಸಿ ಎಂದು ಸಲಹೆ ನೀಡಿದರು.
ಪ್ರತಿಪಕ್ಷ ನಾಯಕ ಎಸ್.ಆರ್ ಪಾಟೀಲ್ ಮಾತನಾಡಿ ಬಿಲ್ ಸ್ವಾಗತಿಸಿದರು. ಐಐಟಿ, ಐಐಎಂ, ಐಐಐ ಗಳಿಗೆ ಕೇಳಿದಷ್ಟು ಭೂಮಿ ಕೊಟ್ಟಿದ್ದೇವೆ, ಆದರೂ ನಮ್ಮ ರಾಜ್ಯದ ಮಕ್ಕಳಿಗೆ ಅವಕಾಶ ಕಡಿಮೆ ಇದೆ ಅದನ್ನು ಪರಿಶೀಲಿಸಬೇಕು, ಈಗ ಶೇ. 25 ಮೀಸಲಾತಿಯನ್ನು ಕಾನೂನು ವಿದ್ಯಾಲಯದಲ್ಲಿ ಕಲ್ಪಿಸಿ 2 ಕೋಟಿ ಅನುದಾನ ಕೊಡುವುದಾಗಿ ಹೇಳಿದ್ದೀರಿ, ಹತ್ತು ವರ್ಷ ಈ ನೆಲದಲ್ಲಿ ಓದಿದವರಿಗೆ ಮೀಸಲು ಕೊಟ್ಟಿರುವುದನ್ನು ಸ್ವಾಗತಿಸುದ್ದೇನೆ ಎಂದು ವಿಧೇಯಕವನ್ನು ಬೆಂಬಲಿಸಿದರು.ವಿಧೇಯಕದ ಮೇಲಿನ ಚರ್ಚೆಯ ನಂತರ ಪಕ್ಷಾತೀತವಾಗಿ ಸರ್ವಾನುಮತದಿಂದ ಧ್ವನಿಮತದ ಮೂಲಕ ರಾಷ್ಟ್ರೀಯ ಕಾನೂನು ವಿದ್ಯಾಲಯ ತಿದ್ದುಪಡಿ ವಿಧೇಯಕ 2020 ಅನ್ನು ಅಂಗೀಕರಿಸಲಾಯಿತು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 