ರಾಷ್ಟ್ರೀಯ ಲೋಕ ಅದಾಲತ್: 496 ಪ್ರಕರಣಗಳಿಗೆ ರಾಜೀ ಸಂಧಾನ
ಲೋಕದರ್ಶನವರದಿ
ಹುನಗುಂದ: ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದಿಂದ ಇಲ್ಲಿನ 3 ನ್ಯಾಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಒಟ್ಟು 496 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ.
ಅದಾಲತ್ನಲ್ಲಿ ರಸ್ತೆ ಅಪಘಾತ, ಅಬಕಾರಿ, ಚೆಕ್ ಬೌನ್ಸ್, ನೀರಿನ ಬಿಲ್, ಬ್ಯಾಂಕ್ ಸಾಲ ವಸೂಲಿ, ಜಮೀನು ಒತ್ತುವರಿ, ಕೌಟುಂಬಿಕ ದೌರ್ಜನ್ಯ, ಕ್ರಿಮಿನಲ್ ಪ್ರಕರಣ, ಮೋಟಾರು ವಾಹನ, ನಿವೇಶನ ಮಾರಾಟ ಒಳಗೊಂಡಂತೆ ತಾಲೂಕಾಧ್ಯಂತ ಒಟ್ಟು 707 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಆಹ್ವಾನಿಸಲಾಗಿತ್ತು.
ತಾಲೂಕು ನ್ಯಾಯಾಲಯದಲ್ಲಿ ಬೆಳಿಗ್ಗೆ 10ಗಂಟೆಯಿಂದ ಸಂಜೆ 5 ರವರೆಗೆ ಅದಾಲತ್ ನಡೆಯಿತು. 3 ನ್ಯಾಯಾಲಯಗಳ ನ್ಯಾಯಾಧೀಶರು ಹಾಗೂ 60ಕ್ಕೂ ಸಮಾಲೋಚನಾ ವಕೀಲರು ಅದಾಲತ್ ನಡೆಸಿಕೊಟ್ಟರು.
ಕೆಲ ಅಜರ್ಿದಾರರು ವಕೀಲರ ಜೊತೆ ಅದಾಲತ್ನಲ್ಲಿ ಭಾಗವಹಿಸಿದ್ದರು. ಸರದಿಯಲ್ಲಿ ಪ್ರಕರಣಗಳು ಇತ್ಯರ್ಥವಾದವು.
ಹಿರಿಯ ದಿವಾಣಿ ನ್ಯಾಯಾಧೀಶರಾದ ರವೀಂದ್ರ ಹೊನೋಲೆ, ಪ್ರಧಾನ ದಿವಾಣಿ ನ್ಯಾಯಾಧೀಶರಾದ ಬಿ.ಮೋಹನ ಬಾಬು, ಅಪರ ದಿವಾಣಿ ನ್ಯಾಯಾಧೀಶರಾದ ಜಗದೀಶಗೌಡ, ಸಂಧಾನಕಾರರಾದ ನ್ಯಾಯವಾದಿ ವಾದಿರಾಜ ಬಿ.ದೇಶಪಾಂಡೆ, ವಕೀಲರ ಸಂಘದ ಅಧ್ಯಕ್ಷ ಬಿ.ಎ.ಆವಟಿ ಹಾಗೂ ವಕೀಲರ ಸಂಘದ ಸದಸ್ಯರು, ಎ.ಪಿ.ಪಿ.ಎಸ್.ಎಂ.ಹಂಜಿ ಉಪಸ್ಥಿತರಿದ್ದರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 