ರಾಷ್ಟ್ರೀಯ ಗಣಿತ ದಿನಾಚರಣೆ
National Mathematics Day
ಹೂವಿನ ಹಡಗಲಿ 23: ಗಣಿತ ಎಲ್ಲಾ ವಿಜ್ಞಾನಗಳ ತಾಯಿ ಎಂದು ಮುಖ್ಯ ಗುರುಗಳಾದ ಸುರೇಶ ಅಂಗಡಿ ಅಭಿಪ್ರಾಯ ವ್ಯಕ್ತಪಡಿಸಿದರು.ಪಟ್ಟಣದ ಸರ್ಕಾರಿ ತುಂಗಭದ್ರಾ ಅನುದಾನಿತ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಭಾರತದ ಪ್ರಸಿದ್ಧ ಗಣಿತಜ್ಞರಾದ ಆರ್ಯಭಟ ಭಾಸ್ಕರ ಶ್ರೀನಿವಾಸ ರಾಮಾನುಜನ್ ಗಣಿತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.ಜನ ಸಾಮಾನ್ಯರ ದೈನಂದಿನ ಬದುಕಿನಲ್ಲಿ ಗಣಿತ ಹಾಸು ಹೊಕ್ಕಾಗಿದೆ. ವ್ಯಾಪಾರ ವಹಿವಾಟು ಕೃಷಿ ವಾಣಿಜ್ಯ ಬ್ಯಾಂಕ್ ವೈದ್ಯಕೀಯ ಶಿಕ್ಷಣ ಮೊದಲಾದ ಎಲ್ಲಾ ಕ್ಷೇತ್ರಗಳಲ್ಲೂ ಗಣಿತ ಅವಶ್ಯವಾಗಿ ಬೇಕು ಎಂದು ತಿಳಿಸಿದರು.ಚಿತ್ರಕಲಾ ಶಿಕ್ಷಕರಾದ ಎಸ್ ದ್ವಾರಕೀಶ್ ರೆಡ್ಡಿ ದೈಹಿಕ ಶಿಕ್ಷಕ ಸ್ವಾಮಿನಾಥ ರಾಮಸ್ವಾಮಿ ಶಿಕ್ಷಕರಾದ ಬಸಪ್ಪ ಕೆ ಆನಂದ್ ಜಿ ಗೀತಾ ಪಿ ಎಂ ಪ್ರತಿಮಾ ಎನ್ ಜಯಮ್ಮ ವೈ ಎಲ್ ಗಿಡ್ಡಾನಾಯ್ಕ್ ಸಂಗಮೇಶ ಸುಂಕದ ಪ್ರಸಾದ್ ಎಸ್ ಸಂತೋಷ್ ಕುಮಾರ್ ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 