ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ : ಯಶಸ್ವಿಗೊಳಿಸಲು ನಾಯಾಧೀಶೆ ತೇಜಸ್ವಿನಿ ಕರೆ
National Road Safety Month Celebration: Chief Minister Tejaswini calls for a successful event
ದಾಂಡೇಲಿ .ಜ. 24 : ಸಾರ್ವಜನಿಕರು ರಸ್ತೆ ನಿಯಮವನ್ನು ಪಾಲಿಸುವುದರ ಮೂಲಕ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಯಶಸ್ವಿಗೊಳಿಸಬೇಕೆಂದು ದಾಂಡೇಲಿ ಜೆ.ಎಮ್.ಎಫ್.ಸಿ ನ್ಯಾಯಾಲಯದ ನಾಯಾಧೀಶೆ ತೇಜಸ್ವಿನಿ ಸೊಗಲದ ಕರೆ ನೀಡಿದರು. ದಾಂಡೇಲಿ ನ್ಯಾಯಾಲಯದ ಎದುರು ಶನಿವಾರ 37 ನೇರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು. ವಾಹನ ಸವಾರರು ಹೆಲ್ಮೇಟ ಧರಿಸುವ ಮೂಲಕ ಸುಗಮ ಸಂಚಾರಕ್ಕೆ ಆದ್ಯತೆ ನೀಡಬೇಕು. ವಾಹನ ಚಾಲಕರು ವಾಹನ ಚಲಾಯಿಸುವಾಗ ಪಾದಚಾರಿಗಳ ಹಿತವನ್ನು ಗಮನದಲ್ಲಿಡಬೇಕು ಎಂದರು.
ದಾಂಡೇಲಿ ವಕೀಲರ ಸಂಘದ ಅಧ್ಯಕ್ಷ ಎಸ್.ಎಮ್ ದಬಗಾರ ಮಾತನಾಡಿ ರಸ್ತೆ ಸುರಕ್ಷತಾ ಮಾಸಾಚರಣೆಯಿಂದ ಜನರಲ್ಲಿ ಜಾಗೃತಿ ಮೂಡುತ್ತದೆ. ಸಾರಿಗೆ ಇಲಾಖೆ ಮಾಡಿದ ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವಿನಾಶ ಕೆ. ವಹಿಸಿದ್ದರು. ದಾಂಡೇಲಿ ನ್ಯಾಯಾಲಯದಿಂದ ಹೊರಟು ನಗರದ ಮುಖ್ಯರಸ್ತೆಯ ಮೂಲಕ ಸಾಗಿ ಪುನ: ನ್ಯಾಯಾಲಯದ ಆವರಣಕ್ಕೆ ತಲುಪಿತು ದಾರಿಯುದ್ದಕ್ಕೂ ರಸ್ತೆ ಸುರಕ್ಷತೆ ಘೊಷಣೆಗಳನ್ನು ಕೂಗಲಾಯಿತು. ಕಾರ್ಯಕ್ರಮದಲ್ಲಿ ದಾಂಡೇಲಿ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯರು ಮತ್ತು ಪಾದಾಧಿಕಾರಿಗಳು, ನ್ಯಾಯಾವಾದಿಗಳ ಸಂಘ, ಅಭಿಯೋಜನಾ ಇಲಾಖೆ, ಸಾರಿಗೆ ಇಲಾಖೆ ಮತ್ತು ಪೋಲಿಸ್ ಇಲಾಖೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ 37 ನೇರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಸಂಘಟಿಸಲಾಗಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 