ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಲೋಕದರ್ಶನ ವರದಿ
ಬೆಳಗಾವಿ, 28: ಕೆಎಲ್ಇ ಉನ್ನತ ಶಿಕ್ಷಣ ಸಂಸ್ಥೆಗಳ ಡಾ.ಪ್ರಭಾಕರ ಕೋರೆ ವಿಜ್ಞಾನ ಸಂಶೋಧನಾ ಕೇಂದ್ರ ಬೆಳಗಾವಿ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು.
ಗುರುವಾರ 28 ಫೆಬ್ರುವರಿ 2019 ರಂದು ನಡೆದ ಸಮಾರಂಭದಲ್ಲಿ ಸರ್ ಡಾ ಸಿ .ವಿ.ರಾಮನ್ಅವರ ಭೌತ ಶಾಸ್ತ್ರದಲ್ಲಿನ ಅಮೂಲ್ಯವಾದ ಸಂಶೋಧನೆಗಳಿಗಾಗಿ ಗೌರವ ಸಮಪರ್ಿಸಲಾಯಿತು. ಕೇಂದ್ರದ ಉಪನಿದರ್ೇಶಕರಾಗಿರುವ ಡಾ.ಸುನೀಲ್ ಜಲಾಲಪುರೆ ಅವರು ಸರ್ವರಿಗೆ ಸ್ವಾಗತ ಕೋರುತ್ತಾ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಮಹತ್ವ ಮತ್ತು ಔಚಿತ್ಯದ ಬಗ್ಗೆ ಮಾತನಾಡಿದರು. ಡಾ.ಪ್ರಭಾಕರ ಕೋರೆ ವಿಜ್ಞಾನ ಸಂಶೋಧನಾ ಕೇಂದ್ರದ ಆಡಳಿತಾತ್ಮಕ ನಿವರ್ಾಹಕರಾಗಿರುವ ಡಾ.ಅಲ್ಕಾ ಕಾಳೆ ಡಾ.ಸಿ.ವಿ.ರಾಮನ್ ಅವರ ಭಾವಚಿತ್ರಕ್ಕೆ ಪುಷ್ಪಹಾರ ಸಮಪರ್ಿಸಿ ಜ್ಯೋತಿ ಬೆಳಗಿಸುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ ಅಲ್ಕಾ ಕಾಳೆ, ಡಾ.ಪ್ರಭಾಕರ ಕೋರೆ ವಿಜ್ಞಾನ ಸಂಶೋಧನಾ ಕೇಂದ್ರದ ಚಟುವಟಿಕೆಗಳ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರಲ್ಲದೇ ಕ್ಯಾನ್ಸರ್ ಕ್ಷಯರೋಗ ಮತ್ತಿತರ ರೋಗಗಳ ನಿಮರ್ೂಲನೆಗಳಿಗೆ ವೈದ್ಯಕೀಯ ಕ್ಷೇತ್ರದ ಪ್ರತಿನಿಧಿಗಳು ಸಕರ್ಾರದೊಂದಿಗೆ ಕೈ ಜೋಡಿಸಬೇಕಾದ ಅವಶ್ಯಕತೆಯಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಎನ್.ಎಸ್,ಎಸ್ ರಾಷ್ಟ್ರೀಯ ಏಕೀಕರಣ ಶಿಬಿರ 2019 ರ 150ಕ್ಕೂ ಹೆಚ್ಚು ಪ್ರತಿನಿಧಿಗಳು ಕೇಂದ್ರಕ್ಕೆ ಭೇಟಿ ನೀಡಿ ಅತ್ಯಾಧುನಿಕ ಉಪಕರಣಗಳ ಬಗ್ಗೆ ಮಾಹಿತಿ ಪಡೆದರು. ಕೇಂದ್ರದ ವಿಜ್ಞಾನಿ ಡಾ ಸಂಜಯ್ ಮಿಶ್ರಾ ವಂದನಾರ್ಪಣೆ ಸಲ್ಲಿಸಿದರು.ಕೇಂದ್ರದ ಸಂಶೋಧನಾ ಸಿಬ್ಬಂದಿ ಮತ್ತು ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 