ಬೈಲಹೊಂಗಲ: ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ವಾರ್ಷಿಕ ಶಿಬಿರ
ಲೋಕದರ್ಶನ ವರದಿ
ಬೈಲಹೊಂಗಲ 17: ಶಿಸ್ತುಬದ್ಧ ವ್ಯಕ್ತಿತ್ವವನ್ನು ರೂಪಿಸಿಕೊಂಡು ಉತ್ತಮ ಪ್ರಜೆಯಾಗಲು ಎನ್.ಎಸ್.ಎಸ್. ಸಹಕಾರಿ ಎಂದು ಶಿವಯೋಗೀಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ.ಬಿ.ಮಲ್ಲೂರ ಹೇಳಿದರು.
ಸಮೀಪದ ಇಂಚಲದ ಶಿವಯೋಗೀಶ್ವರ ಸಂಯುಕ್ತ ಪದವಿ-ಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾಷರ್ಿಕ ಶಿಬಿರ ಉದ್ಘಾಟಿಸಿ ಮಾತನಾಡಿ, ಮಹಾತ್ಮಾ ಗಾಂಧೀಜಿ ಅವರ ಗ್ರಾಮ ರಾಜ್ಯದ ಪರಿಕಲ್ಪನೆಯ ಕನಸಿನ ಕೂಸು ರಾಷ್ರ್ಟೀಯ ಸೇವಾ ಯೋಜನೆ. ವಿದ್ಯಾಥರ್ಿಗಳಿಗೆ ಗ್ರಾಮೀಣ ಜನರ ದೈನಂದಿನ ಬದುಕಿನ ನೈಜ ಚಿತ್ರಣವನ್ನು ಅರಿತುಕೊಳ್ಳಲು ಸಹಕಾರಿಯಾಗಲಿದೆ ಎಂದರು.
ಸಂಸ್ಥೆಯ ಕಾರ್ಯದಶರ್ಿ ಎಸ್.ಎನ್.ಕೊಳ್ಳಿ ಮಾತನಾಡಿ, ವಿದ್ಯಾಥರ್ಿಗಳು ಯೋಜನೆಯಲ್ಲಿ ತೊಡಗಿಸಿಕೊಳ್ಳುವದರಿಂದ ವ್ಯಕ್ತಿಗತವಾದ ಶಿಸ್ತು, ಸ್ವಾವಲಂಬನೆ, ಬದುಕಿನ ರೀತಿ ವ್ಯಕ್ತಿಗತವಾದ ಅಭಿವೃದ್ದಿಯ ಜೊತೆಗೆ ಸುತ್ತಲಿನ ತೊಂದರೆ ಅರಿತುಕೊಂಡು ಅವುಗಳನ್ನು ಸರಿಪಡಿಸಲು ಸಹಕಾರಿಯಾಗುತ್ತದೆ ಎಂದರು.
ಉಪನ್ಯಾಸಕ ಎಸ್.ಬಿ.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಬಿರಾಧಿಕಾರಿಗಳಾದ ಎಂ.ಬಿ.ಹೂಗಾರ, ಆರ್.ವ್ಹಿ.ಅಣ್ಣಿಗೇರಿ, ಎಸ್.ಎಸ್.ರಾಯನಾಯ್ಕರ ಹಾಗೂ ವಿದ್ಯಾಥರ್ಿಗಳು ಉಪನ್ಯಾಸಕ ಶಿಕ್ಷಕ ಸಿಬ್ಬಂದಿ ವರ್ಗ ಇದ್ದರು.
ಪ್ರಾಚಾರ್ಯ ಎಸ್.ಟಿ.ಕಾಂಬಳೆ ಸ್ವಾಗತಿಸಿದರು. ಎನ್.ವಿ.ಪಾಟೀಲ ವಂದಿಸಿದರು. ಎ.ಎಮ್.ಪೂಜಾರ ನಿರೂಪಿಸಿದರು
ಬೆಳಗಾವಿಯಲ್ಲಿ ನ್ಯಾಯವಾದಿ ಮನೆ ಮೇಲೆ ಗುಂಡಿನ ದಾಳಿ, ಹತ್ಯೆಗೆ ಯತ್ನ : ಅತಂಕದಲ್ಲಿ ಜನ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 