ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರ
National Service Scheme Special Annual Camp
ಲೋಕದರ್ಶನ ವರದಿ
ಬೆಳಗಾವಿ 13: ಕೆ.ಎಲ್.ಇ. ಶುಶ್ರೂಷಾ ಮಹಾವಿದ್ಯಾಲಯ ಬೆಳಗಾವಿ ಎನ್.ಎಸ್.ಎಸ್. ಘಟಕ -26 ಇವರ ಸಂಯುಕ್ತ ಆಶ್ರಯದಲ್ಲಿ ವಿಶೇಷ ವಾರ್ಷಿಕ ಶಿಬಿರವನ್ನು ಇತ್ತೀಚೆಗೆ ಅಗಸಗಾ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಶಿಬಿರದ ಅಂಗವಾಗಿ ಪ್ರತಿ ದಿನ ಸ್ವಚ್ಛತಾ ಕಾರ್ಯಕ್ರಮ ಹಾಗೂ ಧ್ವಜಾರೋಹಣ ಮತ್ತು ವಿಭಿನ್ನ ಚಟುವಟಿಕೆಗಳು, ಉಚಿತ ನೇತ್ರ ತಪಾಸಣಾ ಶಿಬಿರ, ಮಧುಮೇಹ ತಪಾಸಣಾ ಶಿಬಿರ, ಮುಟ್ಟಿನ ನೈರ್ಮಲ್ಯದ ಬಗ್ಗೆ ಅರಿವು ಕಾರ್ಯಕ್ರಮ ಮತ್ತು, ಸ್ತನ ಹಾಗೂ ಗರ್ಭಕಂಠದ ಕ್ಯಾನ್ಸರ್ ಬಗೆಗಿನ ಕರಪತ್ರ ಹಂಚಿಕೆ, ಗ್ರಾಮಸ್ಥರಿಗಾಗಿ ಪ್ರಥಮ ಚಿಕಿತ್ಸೆ ಮತ್ತು ಹೃದಯ ರಕ್ತನಾಳದ ಪುನ:ರುಜ್ಜೀವನ ತರಬೇತಿ ಕಾರ್ಯಕ್ರಮ, ಉಚಿತ ಆರೋಗ್ಯ ತಪಾಸಣಾ ಶಿಬಿರ, ಙತಿಹಾಸಿಕ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನ ಮತ್ತು ಪೌಷ್ಠಿಕಾಂಶದ ಮೌಲ್ಯಮಾಪನ ಮತ್ತು ಮಕ್ಕಳ ಬೆಳವಣಿಗೆಯ ಪರೀಶೀಲನೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಪ್ರತಿ ದಿನ ಸಂಜೆ ಶಾಲಾ ಮಕ್ಕಳು ಮತ್ತು ಗ್ರಾಮಸ್ಥರಿಗಾಗಿ ಕ್ರೀಡೆ ರಂಗೋಲಿ, ರಸಪ್ರಶ್ನೆ, ಪ್ರಬಂಧ ಮತ್ತು ಸಂಸ್ಕೃತಿಕ ಕಾರ್ಯಕ್ರಮಗಳನ್ನು ಏರಿ್ಡಸಿ ಬಹುಮಾನ ವಿತರಿಸಲಾಯಿತು.
ಕೆ.ಎಲ್.ಇ. ಶುಶ್ರೂಷಾ ಮಹಾವಿದ್ಯಾಲಯ ಪ್ರಾಚಾರ್ಯರಾದ ಪ್ರೊ (ಡಾ).ವೀರೇಶಕುಮಾರ ನಂದಗಾವ, ಸಹ ಪ್ರಾಧ್ಯಾಪಕರಾದ ಡಾ.ಗುರುರಾಜ ಉಡಪಿ, ಸಂಜೀವ ಬಡ್ಲಿ ಸಂಯೋಜನಾಧಿಕಾರಿಗಳು, ಅಮೃತ ಮುದ್ದಣ್ಣವರ ಗ್ರಾಮ ಪಂಚಾಯತ ಅಧ್ಯಕ್ಷರು, ಗುಂಡು ಕುರೇನ್ನವರ ಗ್ರಾ.ಪ.ಸದಸ್ಯರು, ಶಿವಾನಂದ ಕ ಪಾಟೀಲ ಎಸ್ಡಿಎಂಸಿ, ಅಧ್ಯಕ್ಷರು, ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ರಾದ ಪಿ.ಆರ್.ಚವಾಣ ಸರ್ಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ರಾದ ಪಿ.ಆರ್.ಚವಾಣ, ಮಾಲತಿ ಕಾಂಬಳೆ, ಹಾಗೂ ಎನ್.ಎಸ್.ಎಸ್. ಸ್ವಯಂ ಸೇವಕರು ಮತ್ತು ಊರಿನ ನಾಗರಿಕರು ಶಿಬಿರದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 