ಬಳ್ಳಾರಿಯ ಬಿಎಂಸಿಆರ್ಸಿಯಲ್ಲಿ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ದಿನಾಚರಣೆ
National Surgeons Day celebrated at BMCRC, Bellary
ಲೋಕದರ್ಶನ ವರದಿ
ಬಳ್ಳಾರಿ 18: ಕೆಎಸ್ಸಿ-ಎಎಸ್ಐ ಬಳ್ಳಾರಿ ನಗರ ಶಾಖೆ ಹಾಗೂ ಬಿಎಂಸಿಆರ್ಸಿ ಸಾಮಾನ್ಯ ಶಸ್ತ್ರಚಿಕಿತ್ಸಾ ವಿಭಾಗದ ಸಹಯೋಗದೊಂದಿಗೆ ಬಳ್ಳಾರಿ ವೈದ್ಯಕೀಯ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಆವರಣದಲ್ಲಿ ಸೋಮವಾರ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮತ್ತು ವೃತ್ತಿಪರರಿಗೆ ಉಪಯುಕ್ತವಾಗುವಂತೆ ಕೇಸ್ ಪ್ರೆಸೆಂಟೇಶನ್ ಹಾಗೂ ಅಪರೂಪದ ಪ್ರಕರಣ ವರದಿ ಕುರಿತು ವಿಶೇಷ ಶೈಕ್ಷಣಿಕ ಅಧಿವೇಶನವನ್ನು ಆಯೋಜಿಸಲಾಗಿತ್ತು.
ಎಎಸ್ಐ ಸಂಸ್ಥೆಯು ಯುವ ಮತ್ತು ಉದಯೋನ್ಮುಖ ಶಸ್ತ್ರಚಿಕಿತ್ಸಕರಿಗೆ ನೀಡುತ್ತಿರುವ ಬೆಂಬಲ ಹಾಗೂ ವಿವಿಧ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅಸೋಸಿಯೇಷನ್ ಆಫ್ ಸರ್ಜನ್ಸ್ ಆಫ್ ಇಂಡಿಯಾದ ರಾಷ್ಟ್ರೀಯ ಕಾರ್ಯದರ್ಶಿ ಡಾ. ಗಡ್ಡಿ ದಿವಾಕರ್ ಕರೆ ನೀಡಿದರು.
ಈ ಶೈಕ್ಷಣಿಕ ಸಂವಾದಗಳು ಮತ್ತು ವೈದ್ಯಕೀಯ ಚರ್ಚೆಗಳು ವಿಶೇಷವಾಗಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕಲಿಕೆ, ಸೂಕ್ತ ಮಾರ್ಗದರ್ಶನ ಹಾಗೂ ಅವರ ವೃತ್ತಿಪರ ಅಭಿವೃದ್ಧಿಗೆ ಒಂದು ಅತ್ಯುತ್ತಮ ವೇದಿಕೆಯಾಗಿದೆ ಎಂದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 