ರಾಷ್ಟ್ರೀಯ ಐಕ್ಯತಾ ಸಪ್ತಾಹ: ವಾರ್ತಾ ಇಲಾಖೆಯಲ್ಲಿ ಪ್ರಮಾಣ ವಚನ ಸ್ವೀಕಾರ
ಕೊಪ್ಪಳ 19: ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದ ನಿಮಿತ್ತ ಕೊಪ್ಪಳ ಜಿಲ್ಲಾಡಳಿತ ಭವನದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಇಂದು ``ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ'' ಸ್ವೀಕರಿಸಲಾಯಿತು.
ನ. 19 ರಿಂದ 25ರವರೆಗೆ ``ರಾಷ್ಟ್ರೀಯ ಐಕ್ಯತಾ ಸಪ್ತಾಹ''ವನ್ನು ಆಚರಿಸುವಂತೆ ಸರ್ಕಾರವು ನಿರ್ಧರಿಸಿದ್ದು, ಅದರಂತೆ ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಬಲಪಡಿಸಲು, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವುದಕ್ಕಾಗಿ ಈ ಸಪ್ತಾಹವನ್ನು ಹಮ್ಮಿಕೊಂಡು ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕರಿಸುವಂತೆ ಜಿಲ್ಲಾಡಳಿತ ನೀಡಿದ ನಿದರ್ೇಶನದಂತೆ ವಾರ್ತಾ ಇಲಾಖೆಯಲ್ಲಿ ``ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ'' ಸ್ವೀಕರಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಜಿ. ಸುರೇಶ ಅವರು ಪ್ರಮಾಣ ವಚನ ಬೋಧಿಸಿದರು. ಎಂ. ಅವಿನಾಶ್, ಅರುಣಾ ಭೋಗಿ, ಎಂ. ಪಾಂಡುರಂಗ ಸೇರಿದಂತೆ ಕಚೇರಿಯ ಸಿಬ್ಬಂದಿ ಈ ಸಂದರ್ಭ ಉಪಸ್ಥಿತರಿದ್ದರು.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 