ರಾಷ್ಟ್ರೀಯ ಮತದಾರರ ದಿನಾಚರಣೆಸಧೃಡ ರಾಷ್ಟ್ರ ನಿರ್ಮಾಣಕ್ಕೆಸಂವಿಧಾನಾತ್ಮಕ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ
National Voters' Day: Exercise your constitutional right to vote to build a strong nation: Deputy Co
ರಾಷ್ಟ್ರೀಯ ಮತದಾರರ ದಿನಾಚರಣೆಸಧೃಡ ರಾಷ್ಟ್ರ ನಿರ್ಮಾಣಕ್ಕೆಸಂವಿಧಾನಾತ್ಮಕ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ
ಗದಗ 25: ಸಧೃಡ ಸಮಾಜ, ಸಧೃಢ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಮತದಾನದ ಪಾತ್ರ ಬಹು ಮುಖ್ಯವಾಗಿದ್ದು, ಮತದಾನದ ಹಕ್ಕನ್ನು ಪಡೆದಂತಹ ಪ್ರತಿಯೊಬ್ಬ ಅರ್ಹ ಮಾತದಾರರು ಚುನಾವಣೆಗಳಲ್ಲಿ ತಪ್ಪದೇ ತಮ್ಮ ಹಕ್ಕನ್ನು ಚಲಾಯಿಸುವಂತೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀದರ್ ಅವರು ತಿಳಿಸಿದರು.ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ರವಿವಾರ(ಜ.25) ಜರುಗಿದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮತದಾನ ಎನ್ನುವುದು ಸಂವಿಧಾನಾತ್ಮಕವಾಗಿ ನೀಡಿದಂತಹ ಹಕ್ಕನ್ನು ಬಳಸುವುದುರ ಮೂಲಕ ಸಮಾಜಕ್ಕೆ ಉತ್ತಮ ನಾಯಕರನ್ನು ಆಯ್ಕೆ ಮಾಡುವಂತಹ ಸುವರ್ಣ ಅವಕಾಶವನ್ನು ಮತದಾರರು ಕಳೆದುಕೊಳ್ಳಬಾರದು. ತಮ್ಮ ಅಮೂಲ್ಯವಾದ ಮತದಿಂದ ಸಮಾಜ, ರಾಷ್ಟ್ರಕ್ಕೆ ಉತ್ತಮವಾದವರನ್ನು ಆಯ್ಕೆ ಮಾಡುವುದು ಪ್ರತಿಯೊಬ್ಬ ಅರ್ಹ ಮತದಾರರ ಆದ್ಯ ಕರ್ತವ್ಯವಾಗಿದೆ ಎಂದರು.ಮತದಾನದ ಮಹತ್ವ ಹಾಗೂ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವ ಉದ್ದೇಶದೊಂದಿಗೆ ಚುನಾವಣಾ ಆಯೋಗದಿಂನದ ರಾಷ್ಟ್ರೀಯ ಮತದಾರರ ದಿನವನ್ನು ಕಳೆದ ಹದಿನೈದು ವರ್ಷಗಳಿಂದ ಆಚರಿಸಲಾಗುತ್ತಿದೆ.ಸಂವಿಧಾನಾತ್ಮಕ ನೀಡಿದಂತಹ ಮತದಾನದ ಹಕ್ಕನ್ನು ಚಲಾಯಿಸುವುದು ಯಾರೂ ಕೂಡ ಮರೆಯಬಾರದು ಎನ್ನುವ ಉದ್ದೇಶದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮತದಾನದ ದಿನಗಳಂದು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆ ಆಗುತ್ತಿರುವುದು ಕಳಕವಳಕಾರಿಯಾದಂತಹ ಸಂಗತಿಯಾಗಿದೆ. 18 ವರ್ಷ ಮೇಲ್ಪಟ್ಟಂತಹ ಯುವ ಮತದಾರರು ಈಗಿನಿಂದಲೇ ಉತ್ತಮ ನಾಯಕರನ್ನು ಆರಿಸುವ ಪರಿಪಾಠ ಬೆಳೆಸಿಕೊಳ್ಳಬೇಕು. ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಮತವನ್ನು ತಪ್ಪದೇ ಚಲಾಯಿಸುವುದರ ಮೂಲಕ ಸಶಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಅವರು ಕರೇ ನೀಡಿದರು.ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್.ಶಿವನಗೌಡ್ರ ಅವರು ಮಾತನಾಡಿ ದೇಶದ ಪ್ರಜಾಪ್ರಭುತ್ವ ಉಳಿಯಬೇಕಾದರೆ ಪ್ರತಿಯೊಬ್ಬರು ತಮ್ಮ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಬೇಕು.ಸಂವಿಧಾನ ನಮಗೆ ಮತಾದಾನದನದ ಹಕ್ಕನ್ನು ನೀಡಿದ್ದು ಪ್ರತಿ ಚುನಾವಣೆಗಳಲ್ಲಿ ಮತದಾನ ಮಾಡುವುದು ನಮ್ಮ ಮೂಲಭೂತ ಕರ್ತವ್ಯವಾಗಿದೆ. ಮತದಾರರಲ್ಲಿ ಜಾಗೃತಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವ ಉದ್ದೇಶದೊಂದಿಗೆ ಈ ಕಾರ್ಯಕ್ರಮವನ್ಬು ಆಯೋಜಿಸಲಾಗುತ್ತಿದೆ.ಮತದಾನದ ಪ್ರಮಾಣ ಹೆಚ್ಚಳಕ್ಕಾಗಿ ಚುನಾವಣಾ ಆಯೋಗದಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು ಕೂಡ ಮತದಾನದ ಪ್ರಮಾಣ ಹೆಚ್ಚಾಗದೆ ಇರುವುದು ದುರದೃಷ್ಟಕರ ಸಂಗತಿಯಾಗಿದೆ. ಇದೇ ರೀತಿ ಚುನಾವಣೆಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಾ ಸಾಗಿದರೆ ಮುಂದೊಂದು ದಿನ ಕಡ್ಡಾಯ ಮತದಾನ ಎನ್ನುವ ಕಾನೂನು ಜಾರಿಯಾದರೂ ಆಗಬಹುದು ಎಂದರು. ಯಾವುದೇ ರಾಷ್ಟ್ರ ಮುಂದುವರೆಯಬೇಕಾದರೆ ಯುವಜನತೆಯವ ಪಾತ್ರ ಬಹುಮುಖ್ಯಾವಾಗಿದೆ. ಚುನಾವಣಾ ಆಯೋಗವು ಯುವಜನತೆಗಾಗಿ ಮತದಾನದ ಹಾಗೂ ಮತದಾರರ ಪಟ್ಟಿಗೆ ಸೇರೆ್ಡ ಕುರಿತು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಈ ಕುರಿತು ಇತರರಿಗೂ ಮಾಹಿತಿ ನೀಡಿ ಅವರನ್ನೂ ಕೂಡ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೆಪಿಸಲು ತಿಳಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೆಶಕರ ಬಸನಗೌಡ ಕೋಟೂರ, ಡಿ.ಎಸ್.ಪಿ. ಮುರ್ತುಜಾ ಖಾದ್ರಿ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾ ನಿರ್ದೆಶಕಾರಾದ ಕಂಬಾಳಿಮಠ, ತಹಶೀಲ್ದಾರ ಶ್ರಿನಿವಾಸಮೂರ್ತಿ ಕುಲಕರ್ಣಿ,ಆಹಾರ ಇಲಾಖೆ ಉಪನಿರ್ದೆಶಕ ರಮೇಶ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕಿ ಡಾ. ನಂದಾ ಹಣಬರಟ್ಟಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು. ಉಪವಿಭಾಗಾಧಿಕಾರಿ ಗಂಗಪ್ಪ ಎಂ ಸ್ವಾಗತಿಸಿದರು,ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಮತಾದಾನ ಗುರುತಿನ ಚೀಟಿ ವಿತರಣೆ, ಮತದಾರರ ನೊಂದಣಿ ಕಾರ್ಯದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಬಿ.ಎಲ್.ಓ, ಡಾಟಾ ಎಂಟ್ರಿ ಆಪರೇಟರ, ಪ್ರಬಂಧ ಸ್ಪರ್ಧೆ ವಿಜೇತರುಗಳಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.ತದನಂತರ ವಿಧ್ಯಾರ್ಥಿಗಳು ಮತದಾನದ ಮಹತ್ವ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಸಿ.ಎನ್.ಶ್ರೀಧರ ಅವರು ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 