ಪ್ರಕೃತಿ ವಿಕೋಪ: ಭಾರತದಲ್ಲಿ ಕಳೆದ ವರ್ಷ 5 ದಶಲಕ್ಷ ಮಂದಿ ಸ್ಥಳಾಂತರ: ವಿಶ್ವಸಂಸ್ಥೆ
ನವದೆಹಲಿ, ಮೇ 23,ಅಂಫಾನ್ ಚಂಡಮಾರುತದಿಂದಾಗಿ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಸಂಖ್ಯೆಯ ಜನರ ಸ್ಥಳಾಂತರವಾಗಿದೆ. ಈ ವರದಿಗಳ ಮಧ್ಯೆ, ನೈಸರ್ಗಿಕ ವಿಪತ್ತುಗಳು, ಸಂಘರ್ಷ ಮತ್ತು ಹಿಂಸಾಚಾರದಿಂದಾಗಿ 2019 ರಲ್ಲಿ ಭಾರತದಲ್ಲಿ 5 ದಶಲಕ್ಷಕ್ಕೂ ಹೆಚ್ಚು ಜನರು ಆಂತರಿಕವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ವರದಿ ತಿಳಿಸಿದೆ. ಈ ಅಂಕಿ ಅಂಶವು ವಿಶ್ವದಲ್ಲೇ ಅತಿ ಹೆಚ್ಚು ಆಂತರಿಕ ಸ್ಥಳಾಂತರಗಳನ್ನು ಹೊಂದಿದೆ. ಭಾರತದ ನಂತರ ಫಿಲಿಪೈನ್ಸ್, ಬಾಂಗ್ಲಾದೇಶ ಮತ್ತು ಚೀನಾ ದೇಶಗಳಿವೆ ಎಂದು ವರದಿಯಲ್ಲಿ ಹೇಳಲಾಗಿದೆ.ಯುಎನ್ ಚಿಲ್ಡ್ರನ್ಸ್ ಫಂಡ್ –ಯುನಿಸೆಫ್ ನ ವರದಿ 'ಲಾಸ್ಟ್ ಅಟ್ ಹೋಮ್' 2019 ರಲ್ಲಿ ಸುಮಾರು 33 ಮಿಲಿಯನ್ ಹೊಸ ಸ್ಥಳಾಂತರಗಳನ್ನು ವಿಶ್ವದಾದ್ಯಂತ ದಾಖಲಿಸಲಾಗಿದೆ ಎಂದು ಹೇಳಿದೆ. ಈ ಪೈಕಿ ಸುಮಾರು 25 ದಶಲಕ್ಷ ಜನರು ನೈಸರ್ಗಿಕ ವಿಪತ್ತಿನಿಂದ, 8.5 ದಶಲಕ್ಷ ಮಂದಿ ಸಂಘರ್ಷ ಮತ್ತು ಹಿಂಸಾಚಾರದ ಪರಿಣಾಮದಿಂದಾಗಿ ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 